ಸಿದ್ದರಾಮಯ್ಯರನ್ನು ಸರ್ವೋಚ್ಚ ನಾಯಕ ಎಂದ ಸೋಮಣ್ಣ; ಮತ್ತೆ ಗರಿಗೆದರಿದ ಹೊಸ ಲೆಕ್ಕಾಚಾರ

Date:

Advertisements
  • ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪರ ನಾನು ಕೆಲಸ ಮಾಡಿದ್ದೆ
  • ಅಮಿತ್ ಶಾ ಸೂಚನೆಯಂತೆ ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿದ್ದೇನೆ

    ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ವೋಚ್ಛ ನಾಯಕರು, ರಾಜ್ಯದ ದೊಡ್ಡ ಲೀಡರ್, ಅವರು ಎಲ್ಲಿ ನಿಲ್ಲಬೇಕು ಎಂಬುದು ಅವರ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದರ ಬಗ್ಗೆ ನಾನೇನೂ ಮಾತನಾಡುವುದಿಲ್ಲ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಣ್ಣ, “ನನ್ನ ಪಕ್ಷ ನನಗೆ ಹಲವು ಜವಾಬ್ದಾರಿಗಳನ್ನು ನೀಡಿದೆ. ಪಕ್ಷದ ಮುಖಂಡರಾದ ಅಮಿತ್ ಶಾ ಚಾಮರಾಜನಗರ ಜಿಲ್ಲೆಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಾರ್ಯನಿರ್ವಹಿಸುತ್ತಿರುವೆ” ಎಂದು ಹೇಳಿದರು.

    ಇದೇ ವೇಳೆ ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧಿಸಲಿದ್ದಾರೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಎದುರು ಸ್ಪರ್ಧಿಸುವ ಸಮರ್ಥ ಅಭ್ಯರ್ಥಿಗಳಿದ್ದಾರೆ. ನಾನು ಬೇರೆಯವರ ರೀತಿ ಏನೇನೋ ಮಾತನಾಡಲ್ಲ, ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಚಾಮರಾಜನಗರಕ್ಕೆ ಹೋಗಿ ಕೆಲಸ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಹೀಗಿರುವಾಗ ನಾನ್ಯಾಕೆ ವರುಣಾಗೆ ಹೋಗಿ ನಿಲ್ಲಲಿ, ಎಂದು ಪ್ರಶ್ನಿಸಿದರು.

    Advertisements

    ನನಗೆ ಪಕ್ಷ ಏನೇ ಕೆಲಸ ಕೊಟ್ಟರೂ ಮಾಡುತ್ತೇನೆ. ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಪ ಚುನಾವಣೆಗೆ ನಿಂತಾಗ ನಾನು ಕೆಲಸ ಮಾಡಿದ್ದೆ. 42 ಬೂತ್ ಜವಾಬ್ದಾರಿ ತೆಗೆದುಕೊಂಡಿದ್ದೆ. ಚುನಾವಣೆಯಲ್ಲಿ ಶಕ್ತಿಗಿಂತ ಅದೃಷ್ಟ ಮುಖ್ಯ, ಅದಕ್ಕಿಂತ ಮುಖ್ಯವಾಗಿ ಸಿದ್ದರಾಮಯ್ಯ ರಾಜ್ಯದಲ್ಲಿ ಸರ್ವೋಚ್ಚ ನಾಯಕರು ಎಂದು ಸೋಮಣ್ಣ ತಿಳಿಸಿದರು.

    ಇದೇ ವೇಳೆ ತಮ್ಮ ಸ್ಪರ್ಧಾ ಕ್ಷೇತ್ರದ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ ಸೋಮಣ್ಣ, ನಾನು ಹನೂರು ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದರೆ ಯಾರೂ ಬೇಡ ಎನ್ನಲ್ಲ. ಸದ್ಯ ನನಗೆ ಗೋವಿಂದರಾಜ ನಗರ ಕ್ಷೇತ್ರವಿದೆ ಎಂದರು.

    bfe5ebf00de2b670976597f37a6d2b77?s=150&d=mp&r=g
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

    "ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

    ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

    ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

    ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

    ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

    ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

    Download Eedina App Android / iOS

    X