ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

Date:

Advertisements

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ತ್ರಿಪಾಠಿ ಅವರು ಪ್ರಸ್ತುತ ವೈಸ್ ಅಡ್ಮಿರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಲಿ ನೌಖಾಪಡೆಯ ಮುಖ್ಯಸ್ಥರಾಗಿರುವ ಅಡ್ಮರಲ್ ಆರ್ ಹರಿ ಕುಮಾರ್ ಅವರು ಏ.30 ರಂದು ನಿವೃತ್ತಿಯಾಗಲಿದ್ದು, ಅದೇ ದಿನದಂದು ಡಿ ಕೆ ತ್ರಿಪಾಠಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮೇ 15, 1964 ರಂದು ಜನಿಸಿದ ತ್ರಿಪಾಠಿ, ಖಡಕ್ವಾಸ್ಲಾದ ಸೈನಿಕ್ ಶಾಲೆಯಲ್ಲಿ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಶಿಕ್ಷಣ ಪಡೆದುಕೊಂಡರು. 1985 ರಲ್ಲಿ ಭಾರತೀಯ ನೌಕಾಪಡೆ ಸೇರ್ಪಡೆಗೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ತ್ರಿಪಾಠಿ ಅವರು ಆರಂಭದಲ್ಲಿ ನೌಕಾಪಡೆಯ ಮುಂಚೂಣಿ ಯುದ್ಧ ನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕ್ಷಿಪಣಿ ವಿಧ್ವಂಸಕ ಐಎನ್‌ಎಸ್ ಮುಂಬೈನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪ್ರಧಾನ ಯುದ್ಧ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಸುಮಾರು 39 ವರ್ಷಗಳ ಕಾಲ ಅವರ ಸುದೀರ್ಘ ಸೇವೆಯಲ್ಲಿ, ಮುಂಬೈನ ವೆಸ್ಟರ್ನ್ ಫ್ಲೀಟ್‌ನ ಫ್ಲೀಟ್ ಕಾರ್ಯನಿರ್ವಹಣೆಯ ಅಧಿಕಾರಿ, ನೌಕಾ ಕಾರ್ಯಾಚರಣೆಗಳ ನಿರ್ದೇಶಕ, ಪ್ರಧಾನ ನಿರ್ದೇಶಕ ನೆಟ್ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು ಮತ್ತು ನೌಕಾ ಯೋಜನೆಗಳ ಪ್ರಧಾನ ನಿರ್ದೇಶಕ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ತ್ರಿಪಾಠಿ ಅವರ ಸೇವೆಗೆ ಕೇಂದ್ರ ಸರ್ಕಾರವು ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ನವೋ ಸೇನಾ ಪದಕಗಳನ್ನು ನೀಡಿ ಗೌರವಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X