ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

Date:

Advertisements

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದಿನ್ಹಾಟಾದಲ್ಲಿರುವ ಬಿಜೆಪಿ ಬೂತ್ ಅಧ್ಯಕ್ಷನ ಮನೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಅಧಿಕಾರಿಗಳು ಬಾಂಬ್ ಅನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಂತದಲ್ಲಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Advertisements

ತಮ್ಮ ಮುಖಂಡನ ಮನೆ ಮೇಲೆ ಟಿಎಂಸಿ ಕಾರ್ಯಕರ್ತರು ಕಚ್ಚಾ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಲೋಕಸಭಾ ಕ್ಷೇತ್ರದ ಚಂದಮಾರಿಯಲ್ಲಿ ಮತಗಟ್ಟೆಯೊಂದರ ಮುಂದೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಚಂದಮಾರಿಯಲ್ಲಿ ಮತದಾರರು ಮತದಾನ ಮಾಡದಂತೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಈ ಕಲ್ಲು ತೂರಾಟದಲ್ಲಿ ಬಿಜೆಪಿಯ ಮತಗಟ್ಟೆ ಏಜೆಂಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭಾರಿ ಭದ್ರತಾ ವ್ಯವಸ್ಥೆಗಳ ನಡುವೆಯೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ. ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ತಮನ್‌ಪೋಕ್ಪಿ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇಂಫಾಲ್‌ ಪೂರ್ವ ಜಿಲ್ಲೆಯ ತೊಂಗ್ಜು ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಗಲಭೆ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಚುನಾವಣಾ ಆಯೋಗದ ವರದಿಯಂತೆ  ವಿವಿಧ ರಾಜ್ಯಗಳಲ್ಲಿ ಮತದಾನವಾಗಿರುವ ಅಂಕಿಅಂಶ

Election turnout

Election turnout 1

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X