ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

Date:

Advertisements

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು, ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಅವರ ಅದ್ಭುತ ಫಿನಿಶಿಂಗ್ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 177 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಕೆ ಎಲ್ ರಾಹುಲ್ ನೇತೃತ್ವದ ತಂಡವು 19 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು 180 ರನ್ ದಾಖಲಿಸುವ ಮೂಲಕ ಬಲಿಷ್ಠ ಚೆನ್ನೈ ವಿರುದ್ಧ ಗೆದ್ದು ಬೀಗಿದೆ.

Advertisements

ಗುರಿ  ಬೆನ್ನತ್ತಿದ ಲಕ್ನೋ ಸೂಪರ್​ ಜೈಂಟ್ಸ್​​ ತಂಡದ ಪರ ನಾಯಕ, ಕನ್ನಡಿಗ ಕೆ.ಎಲ್​​ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಮೊದಲ ವಿಕೆಟ್‌ಗೆ 134 ರನ್‌ಗಳ ಜೊತೆಯಾಟ ನಡೆಸುವ ಮೂಲಕ ಚೆನ್ನೈ ಬೌಲರ್​ಗಳನ್ನು ಕಾಡಿದರು. ಕ್ವಿಂಟನ್​ ಡಿಕಾಕ್​​ ತಾನು ಆಡಿದ 43 ಎಸೆತದಲ್ಲಿ 1 ಸಿಕ್ಸರ್​​, 5 ಬೌಂಡರಿ ಸಮೇತ ಅರ್ಧಶತಕ ಸಿಡಿಸಿ. ಮಿಂಚಿದರು. ಮುಸ್ತಫೀಝ್‌ ರಹ್ಮಾನ್ ಎಸೆತದಲ್ಲಿ ವಿಕೆಟ್ ಕೀಪರ್ ಧೋನಿಗೆ ಕ್ಯಾಚಿತ್ತು ಔಟಾದರು.

ಆ ಬಳಿಕ ಬ್ಯಾಟಿಂಗ್​ ಮುಂದುವರಿಸಿದ ಕೆ ಎಲ್ ರಾಹುಲ್​​, 52 ಎಸೆತದಲ್ಲಿ ಭರ್ಜರಿ 3 ಸಿಕ್ಸರ್​​, 9 ಬೌಂಡರಿಯ ನೆರವಿನಿಂದ  82 ರನ್​ ಬಾರಿಸಿದರು. ಥರ್ಡ್‌ ಮೆನ್‌ನಲ್ಲಿದ್ದ ರವೀಂದ್ರ ಜಡೇಜಾ ಹಿಡಿದ ಅಧ್ಭುತ ಕ್ಯಾಚ್‌ನಿಂದಾಗಿ ರಾಹುಲ್ ಔಟಾದರು.

ಆ ಬಳಿಕ ಬಂದ ನಿಕೊಲಸ್ ಪೂರನ್​ ಕೇವಲ 12 ಬಾಲ್​ನಲ್ಲಿ 23 ರನ್​ ಬಾರಿಸಿದರೆ, ಸ್ಟೋಯ್ನಿಸ್ 8 ರನ್ ಗಳಿಸಿ, ಔಟಾಗದೆ ಉಳಿಯುವ ಮೂಲಕ ಲಕ್ನೋ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಚೆನ್ನೈ ಪರ ಬೌಲಿಂಗ್‌ನಲ್ಲಿ ಮುಸ್ತಫೀಝ್‌ ರಹ್ಮಾನ್ ಹಾಗೂ ಪತಿರಾನ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X