ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

Date:

Advertisements

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್‌ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ.

ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಮಾತನಾಡಿದ ಅವರು, “ನಾವು ಇನ್ನೂ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ಮಾಡಬೇಕಿದೆ. ಎಲ್ಲರಿಗೂ ಸ್ವೀಕಾರಾರ್ಹವಾದ ಯೋಜನೆ ತಯಾರಿಗೆ ನಾವು ಏನು ಮಾಡಬೇಕು ನೋಡೋಣ. ಪ್ರಾಥಮಿಕವಾಗಿ ಪಾರದರ್ಶಕತೆ ಉಳಿಸಿಕೊಳ್ಳಬೇಕು” ಎಂದು ಹೇಳಿದರು.

“ಕಪ್ಪುಹಣದ ಸಾಧ್ಯತೆಯನ್ನು ಇದು (ಚುನಾವಣಾ ಬಾಂಡ್) ಸಂಪೂರ್ಣವಾಗಿ ತೆಗೆದುಹಾಕುತ್ತದೆ. ಆದರೆ ಸುಪ್ರೀಂ ಕೋರ್ಟ್ (ಎಸ್‌ಸಿ) ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆ ಎಂದು ಕೇಂದ್ರ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಸುಪ್ರೀಂಕೋರ್ಟ್‌ ರದ್ದು ಮಾಡಿದ ಪ್ರಸ್ತುತ ಯೋಜನೆಯು ಪಾರದರ್ಶಕತೆ ಹೊಂದಿದೆ” ಎಂದೂ ತಿಳಿಸಿದರು.

Advertisements

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಇನ್ನು ಈ ಸಂದರ್ಭದಲ್ಲೇ ಯೋಜನೆಯ ಕೆಲವು ಅಂಶಗಳು ಸುಧಾರಣೆಯ ಅಗತ್ಯವಿದೆ ಎಂದು ಹೇಳಿದ ಸಚಿವೆ ಸೀತಾರಾಮನ್ ಅವರು “ಉತ್ತಮ ಸಮಾಲೋಚನೆಯ” ನಂತರ ಚುನಾವಣಾ ಬಾಂಡ್ ಯೋಜನೆಯನ್ನು ಯಾವುದಾದರೂ ರೂಪದಲ್ಲಿ ಮತ್ತೆ ಆರಂಭಿಸಬಹುದು ಎಂದು ಹೇಳಿದ್ದಾರೆ.

ಇನ್ನು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಹಣಕಾಸು ಸಚಿವರು ಸಮರ್ಥಿಸಿಕೊಂಡಿರುವುದು ಇದೇ ಮೊದಲಲ್ಲ. ಈ ಹಿಂದೆ “ಈ ಯೋಜನೆಯು ಹಿಂದಿದ್ದ ಯೋಜನೆಗಿಂತ ಒಂದು ಹೆಜ್ಜೆ ಉತ್ತಮವಾಗಿದೆ, ಪಾರದರ್ಶಕತೆಯಿದೆ” ಎಂದಿದ್ದರು.

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ -ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಬಾಂಡ್‌ ಮೂಲಕ ದೇಣಿಗೆ ನೀಡಿದವರ ಮತ್ತು ಬಾಂಡ್ ಮೂಲಕ ದೇಣಿಗೆ ಪಡೆದ ಪಕ್ಷದ ಮಾಹಿತಿಯನ್ನು ಗೌಪ್ಯವಾಗಿ ಉಳಿಸಿಕೊಳ್ಳುವ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರವು ಜನವರಿ 2, 2018 ರಂದು ಆರಂಭಿಸಿದೆ. ಆದರೆ ಇದು ಪಾರದರ್ಶಕತೆ ಹೊಂದಿಲ್ಲ ಎಂದು ಫೆಬ್ರವರಿ 2024 ರಲ್ಲಿ, ಐದು ನ್ಯಾಯಾಧೀಶರ ಸಂವಿಧಾನ ಪೀಠವು ಈ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X