ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

Date:

Advertisements

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ರೋಹಿತ್ ತ್ಯಾಗಿಯನ್ನು ಆತನ ಊರಿನಿಂದ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇದು ತಮಾಷೆ ಮಾಡುವ ಉದ್ದೇಶದಿಂದ ಮಾಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ, ಖಾನ್ ಅವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಪ್ರಯಾಣಿಸಲು ರೋಹಿತ್ ತ್ಯಾಗಿ ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ. ಕ್ಯಾಬ್ ಡ್ರೈವರ್ ವಿಳಾಸವನ್ನು ತಲುಪಿದಾಗ, ಇದು ತಮಾಷೆ ಎಂದು ಅರಿತು ದೂರು ದಾಖಲಿಸಿದ್ದಾರೆ.

Advertisements

ಇದನ್ನು ಓದಿದ್ದಿರಾ?  ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತ್ಯಾಗಿಯನ್ನು ಪತ್ತೆ ಹಚ್ಚಿದ್ದಾರೆ.

ಕಳೆದ ಭಾನುವಾರ ಖಾನ್ ಅವರ ನಿವಾಸದ ಮೇಲೆ ಮೋಟಾರ್‌ಬೈಕ್‌ನಲ್ಲಿ ಬಂದು ಗುಂಡು ಹಾರಿಸಲಾಗಿದೆ. ಈ ಘಟನೆಯ ಬಳಿಕ ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್ ಆನ್‌ಲೈನ್ ಪೋಸ್ಟ್‌ನಲ್ಲಿ ಈ ದಾಳಿಯ ಹೊಣೆ ಹೊತ್ತಿದ್ದಾರೆ. ಹಾಗೆಯೇ ಬಾಲಿವುಡ್ ನಟನಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಇನ್ನು ಪೊಲೀಸ್ ಮೂಲಗಳ ಪ್ರಕಾರ ಸಲ್ಮಾನ್ ಖಾನ್‌ ನಿವಾಸಕ್ಕೆ ಗುಂಡು ಹಾರಿಸಿದ ಇಬ್ಬರೂ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವಾಗಿದ್ದಾರೆ. ಗಾಯಕ ಸಿಧು ಮೂಸ್ ವಾಲಾ ಮತ್ತು ರಜಪೂತ ನಾಯಕ ಮತ್ತು ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಸೇರಿದಂತೆ ಹಲವಾರು ಪ್ರಮುಖ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಷ್ಣೋಯ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X