ಬೇಲೂರಿನ ಚನ್ನಕೇಶವ ದೇಗುಲದ ಗೋಪುರಕ್ಕೆ ಬಡಿದ ಸಿಡಿಲು; ಪುರಾತತ್ವ ಇಲಾಖೆಗೆ ಮಾಹಿತಿ

Date:

Advertisements

ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಾಲಯದ ಮೇಲ್ಭಾಗದ ಕಳಸದ ಪಕ್ಕವಿರುವ ಎರಡು ಕೊಂಬುಗಳಲ್ಲಿ ಒಂದು ಭಾಗಕ್ಕೆ ಸಿಡಿಲು ಬಡಿದಿದ್ದು, ಪರಿಣಾಮ ಹಾನಿಯಾಗಿ ಬಿರುಕು ಬಿಟ್ಟಿದೆ.

ಗುರುವಾರ ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿದಿದ್ದು, ಬೇಲೂರಿನ ಚನ್ನಕೇಶವ ದೇವಾಲಯದ ಮೇಲ್ಭಾಗಕ್ಕೆ ಹಾನಿಯಾಗಿದೆ. ತಹಶೀಲ್ದಾರ್‌ ಎಂ ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ‘ಪುರಾತತ್ವ ಇಲಾಖೆಯವರಿಗೆ ಮಾಹಿತಿ ನೀಡಿ, ಮುಂದಿನ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

Advertisements

ದೇಗುಲದ ಪ್ರಧಾನ ಅರ್ಚಕರುಗಳಾದ ಶ್ರೀನಿವಾಸ್ ಭಟ್ ಹಾಗೂ ನರಸಿಂಹಪ್ರಿಯಭಟ್ ಮಾತನಾಡಿ, “ದೇವಾಲಯದ ನಿರ್ಮಾಣದ ಸಂದರ್ಭದಲ್ಲಿ ದೇವಾಲಯಕ್ಕೆ ಹಾಗೂ ಗೋಪುರಗಳಿಗೆ ಯಾವುದೇ ರೀತಿಯ ಸಿಡಿಲು ಹಾಗೂ ಪ್ರಕೃತಿ ವಿಕೋಪದಿಂದ ಹಾನಿ ಆಗದಂತೆ ನಿರ್ಮಾಣ ಮಾಡಿದ್ದಾರೆ. ಆದರೆ, ಸಿಡಿಲಿನಿಂದ ಹಾನಿಯಾಗಿದೆ. ಯಾವ ಭಕ್ತಾದಿಗಳು ಆತಂಕ ಪಡುವ ಅಗತ್ಯತೆ ಇಲ್ಲ. ಆಗಮಿಕರ ಸಲಹೆ ಪಡೆದು ಅಂತರಂಗ ಶುದ್ಧಿ ಹಾಗೂ ಅಂಗೋದಕ ಶುದ್ಧಿ ಮಾಡಲಾಗುವುದು” ಎಂದರು.

ದೇಗುಲ ಕಾರ್ಯನಿರ್ವಹಣಾಧಿಕಾರಿ ವಿದ್ಯುಲ್ಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಕಂದಾಯ ನಿರೀಕ್ಷಕ ಪ್ರಕಾಶ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X