ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

Date:

Advertisements

“ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ ಮಾತನಾಡಿದರು.

“ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವು ಮಾಡಿರುವ ಕಾರ್ಯಗಳ ಪ್ರಮಾಣಪತ್ರದ ಜೊತೆಯಲ್ಲಿ ನಿಮ್ಮ ಆಶೀವಾರ್ದ ಪಡೆಯಲು ಬಂದಿದ್ದೇನೆ. ನಿಮ್ಮನ್ನೇ ನನ್ನ ಪರಿವಾರ ಎಂದು ನಾನು ಭಾವಿಸಿದ್ದೇನೆ. ನಿಮಗಾಗಿ ಹಗಲು ರಾತ್ರಿ ನಾನು ದುಡಿಯುತ್ತೇನೆ. ನಿಮ್ಮ ಕನಸೇ ಮೋದಿಯ ಸಂಕಲ್ಪ. ದಿನದ 24 ಗಂಟೆಯೂ, ವಾರದ ಏಳು ದಿನವೂ, 2047ರವರೆಗೆ ನಿಮಗಾಗಿ ಕೆಲಸ ಮಾಡುವ ಸಂಕಲ್ಪ ಹೊಂದಿದ್ದೇನೆ. ನಾನು ಯೋಜನೆಯನ್ನು ಮಾತ್ರ ಮಾಡುವುದಲ್ಲ ಅದರ ಗ್ಯಾರಂಟಿಯನ್ನು ನೀಡುತ್ತೇನೆ” ಎಂದು ಪ್ರಧಾನಿ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಹೇಳಿದರು.

Advertisements

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ- ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

“ನಮೋ ಡ್ರೋನ್ ಮೂಲಕ ಹೆಣ್ಣು ಮಕ್ಕಳಿಗೆ ಡ್ರೋನ್‌ನ ತರಬೇತಿ ನೀಡಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರದ ಹೊಲಗಳಲ್ಲಿ ನಮ್ಮ ಹೆಣ್ಣುಮಕ್ಕಳು ಡ್ರೋನ್ ಮೂಲಕ ವ್ಯವಸಾಯಕ್ಕೆ ಸಹಾಯ ಮಾಡುವ ದಿನ ದೂರವಿಲ್ಲ” ಎಂದರು.

ಇನ್ನು ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ, “ನೀವು ಎನ್‌ಡಿಎ ಮತ್ತು ಇಂಡಿ ಒಕ್ಕೂಟ ಎರಡರ ಪ್ರಚಾರ ಅಭಿಯಾನವನ್ನು ನೋಡುತ್ತಿರುವಿರಿ. ಕಾಂಗ್ರೆಸ್‌ ಮತ್ತು ಇಂಡಿ ಒಕ್ಕೂಟದ ವಿಷಯ ಮೋದಿ, ಮೋದಿ ಪರಿವಾರ, ಮೋದಿ ಮೇಲೆ ಹಾಕಲಾಗುತ್ತಿರುವ ಸುಳ್ಳು ಆರೋಪಗಳಾಗಿದೆ. ಆದರೆ ನನ್ನ ಚಿತ್ತ 21ನೇ ಶತಮಾನದ ಭಾರತದ ವಿಕಾಸವಾಗಿದೆ. ಭಾರತದ ನಾಗರಿಕರ ಸುವಿಧ ಮತ್ತು ಸಮೃದ್ಧಿಯಾಗಿದೆ” ಎಂದು ಹೇಳಿದರು.

“ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಉತ್ತಮ ನಗರವನ್ನಾಗಿಸುವ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಕೆಲವೇ ಸಮಯದಲ್ಲಿಯೇ ಇಲ್ಲಿನ ಸ್ಥಿತಿಯನ್ನು ಬಿಗಡಾಯಿಸಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X