ಬೀದರ್‌ | ಕಾಂಗ್ರೆಸ್ ಅಭ್ಯರ್ಥಿಯಿಂದ ಸುಳ್ಳು ಮಾಹಿತಿ : ಭಗವಂತ ಖೂಬಾ ಆಕ್ಷೇಪಣೆ ಸಲ್ಲಿಕೆ

Date:

Advertisements

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರು, ತನ್ನ ಚುನಾವಣೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಗವಂತ ಖೂಬಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಇನ್ನು ವಕೀವ ವೃತ್ತಿ ಪೂರ್ಣಗೊಳಿಸಿಲ್ಲ, ಆದರೆ ನಾನೊಬ್ಬ ವಕೀಲನಿದ್ದೇನೆ, ಸುಪ್ರೀಂ ಕೊರ್ಟ್ ಜಡ್ಜ್ ಕೆಳಗಡೆ ಕೆಲಸ ಮಾಡುತ್ತಿರುವೆ ಎಂದೆಲ್ಲಾ ಸುಳ್ಳು ಹೇಳಿಕೊಂಡಿದ್ದಾರೆ. ಹೀಗಾಗಿ ಸಾಗರ ಖಂಡ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಸಾಗರ ಖಂಡ್ರೆ ಕೇವಲ ಎಲ್‌ಎಲ್‌ಬಿ ಪಾಸ್ ಮಾಡಿದ್ದಾರೆ, ಆದರೆ ವಕೀಲ ವೃತ್ತಿ ಪ್ರಾರಂಭಿಸಬೇಕೆಂದರೆ, ಅಖಿಲ ಭಾರತ ಬಾರ್ ಅಸೋಶಿಯೇಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಸರ್ಟಿಫಿಕೇಟ್ ಆಫ್ ಪ್ರಾಕ್ಟೀಸ್ ಸರ್ಟಿಫಿಕೇಟ್ ಪಡೆದ ಮೇಲೆ ಇವರು ವಕೀಲರಾಗಬಹುದು. ಆದರೆ ಸಾಗರ್ ಖಂಡ್ರೆ ಇನ್ನು ಸದರಿ ಪರೀಕ್ಷೆ ಪಾಸಾಗಿರುವುದಿಲ್ಲ. ಹಾಗಾಗಿ ಇವರು ವಕೀಲರಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ತನ್ನ ಅಫೀಡಾವಿಟ್‌ನಲ್ಲಿ ಆದಾಯದ ಮೂಲ ವಕೀಲ ವೃತ್ತಿಯಿಂದ ಬಂದಿರುವುದು ಎಂದು ಹೇಳಿಕೊಂಡಿದ್ದಾರೆ, ಇದು ಸಂಪೂರ್ಣ ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿದ್ದಾರೆ” ಎಂದು ಪ್ರತಿಪಾದಿಸಿದರು.

Advertisements

ಸಾಗರ್‌ ಖಂಡ್ರೆ ಕೇವಲ 26 ವರ್ಷದವರಾಗಿದ್ದು, ಇವರಿಗೆ ಮೂವರು 1.50 ಕೋಟಿ ರೂ. ಕೈ ಸಾಲ ನೀಡಿದ್ದಾರೆ. ಸದರಿ ಮಾಹಿತಿಯೂ ಶುದ್ಧ ಸುಳ್ಳಾಗಿದ್ದು, ರಾಜಕೀಯಕ್ಕೆ ಬರುವ ಮುನ್ನವೆ ಇಷ್ಟೊಂದು ಸುಳ್ಳು ಹೇಳುವ ಸಾಗರ್ ಖಂಡ್ರೆ, ಜನರಿಗೆ ದಾರಿ ತಪ್ಪಿಸುವುದರಲ್ಲಿ ತಂದೆಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಪ್ಪ ಮಕ್ಕಳ ಜೊತೆ ಯಾವುದೇ ರೀತಿ ವ್ಯವಹಾರ ಮಾಡುವ ಮುನ್ನ ಹತ್ತಾರು ಬಾರಿ ಯೋಚಿಸಿ ಎಂದು ಜನತೆಯಲ್ಲಿ ಭಗವಂತ ಖೂಬಾ ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯ ರೈತರಿಗೆ 1,200 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಖೂಬಾ ಹೇಳಿದ್ದು ಸುಳ್ಳು : ಖಂಡ್ರೆ

ಪರಿಪೂರ್ಣ ವಕೀಲ ಆಗದೆ ಇದ್ದರೂ, ನಾನೊಬ್ಬ ವಕೀಲ ಇದ್ದೇನೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಸಾಗರ ಖಂಡ್ರೆ ಮೊದಲು ಕಾನೂನಿಗೆ ಗೌರವಿಸುವುದು ಕಲಿಯಲಿ, ಸರಿಯಾದ ಮಾಹಿತಿ
ನೀಡುವುದು ಕಲಿತುಕೊಳ್ಳಲಿ ಆಮೇಲೆ ನನ್ನ ಜೊತೆಗೆ ಚರ್ಚೆಗೆ ಬರಲಿ ಎಂದು ಭಗವಂತ ಖೂಬಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X