ಬೀದರ್‌ | ಅವಹೇಳನಕಾರಿ ಭಾಷಣ; ನಗರಸಭೆ ಸದಸ್ಯ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

Date:

Advertisements

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ಬೀದರ್ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ ಗಾದಗಿ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ಬಸವೇಶ್ವರ ವೃತ್ತದ ಬಳಿ ಕಾಲೇಜು ವಿದ್ಯಾರ್ಥಿಗಳು, ಹಿಂದೂ ಪರ ಮುಖಂಡರು ಸೇರಿ ನಡೆಸಿದ ಪ್ರತಿಭಟನೆಯ ಬಹಿರಂಗ ಸಭೆಯಲ್ಲಿ ಮುಖಂಡ ವೀರೂಪಾಕ್ಷ ಗಾದಗಿ ಮಾತನಾಡಿ, “ನೇಹಾ ಹಿರೇಮಠ ಹತ್ಯೆ ಬಗ್ಗೆ ಗೃಹ ಸಚಿವ ಪರಮೇಶ್ವರ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ಅಲ್ಲದೇ ಗೃಹ ಸಚಿವ ಪರಮೇಶ್ವರ ವಿರುದ್ಧ ಅವಾಚ್ಯ ಶಬ್ದಗಳಿಂದ ಅವರ ಕುಟುಂಬವನ್ನು ನಿಂದಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ಪೌರಾಡಳಿತ ಸಚಿವ ರಹೀಂ ಖಾನ್ ಒಬ್ಬ ನಾಲಾಯಕ್, ಬುದ್ಧಿಗೇಡಿ, ಮೂರ್ಖನಾಗಿದ್ದಾನೆ ಎಂದಿದ್ದಾರೆ. ನಗರದ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಓದುವ ಹೆಣ್ಣು ಮಕ್ಕಳು ಡಾಕ್ಟರ್ ಆಗಬಹುದು ಆದರೆ ಹಿಂದೂ ಹೆಣ್ಣು ಆಗಿ ಉಳಿಯುವುದಿಲ್ಲ ಎಂದಿದ್ದಾರೆ.

Advertisements

ಈ ರೀತಿ ಸಮಾಜದಲ್ಲಿ ಸಮುದಾಯಗಳ ನಡುವೆ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಸಮುದಾಯಗಳ ನಡುವೆ ಕೋಮು ಸೌಹಾರ್ದ ಉಂಟು ಮಾಡುತ್ತಿದ್ದಾರೆ ಎಂದು ಹಳ್ಳದಕೇರಿ (ಕೆ) ಗ್ರಾಮದ ಮುಖಂಡ ಧನರಾಜ ಹಂಗರಗಿ ಅವರು ಬೀದರ್‌ ನಗರ ಠಾಣೆಯಲ್ಲಿ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈದಿನ ಸಂದರ್ಶನ | ಬದ್ಧತೆ ಮೈಗೂಡಿಸಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ

ದೂರಿನ್ವಯ ಕಲಂ 153B, 504, 505(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ ಗಾದಗಿ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X