ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಶನಿವಾರ ಘೋಷಿಸಿದ್ದಾರೆ.
ಏಪ್ರಿಲ್ 19 ರಂದು ಈ ಕೇಂದ್ರಗಳಲ್ಲಿ ನಡೆದ ಚುನಾವಣೆಗಳನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸಲಾಗಿದ್ದು, ಹೊಸ ಮತದಾನವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ
ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ ಕ್ಷೇತ್ರಗಾವೊದಲ್ಲಿ ನಾಲ್ಕು ಮತಗಟ್ಟೆಗಲ್ಲಿ, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ ಒಂದು ಮತ್ತು ಉರಿಪೋಕ್ನಲ್ಲಿ ಮೂರು ಮತಗಟ್ಟೆಗಲ್ಲಿ, ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್ನಲ್ಲಿ ಒಂದು ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಂಘರ್ಷ ಪೀಡಿತ ಮಣಿಪುರದ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದಿದೆ. ಜೊತೆಗೆ ಬೂತ್ ವಶಪಡಿಸಿಕೊಂಡ ಆರೋಪಗಳು ಕೂಡಾ ಕೇಳಿಬಂದಿದೆ. ಶುಕ್ರವಾರದಂದು ಎರಡು ಲೋಕಸಭಾ ಕ್ಷೇತ್ರಗಳಾದ ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಮತದಾನ ನಡೆದಿದ್ದು ಶೇಕಡ 72ರಷ್ಟು ಮತದಾನವಾಗಿದೆ.
ಇದನ್ನು ಓದಿದ್ದೀರಾ? ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ
ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿತ್ತು.
VIDEO | Lok Sabha Elections 2024: Here’s what Congress leader Keisham Meghachandra (@meghachandra_k) said on the party filing a complaint with the Election Commission against the alleged rigging during voting in Manipur today.
“Workers and agents of Congress candidates were… pic.twitter.com/edgto3M9fO
— Press Trust of India (@PTI_News) April 19, 2024
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ, “ಒಳ ಮಣಿಪುರ ಕ್ಷೇತ್ರದ 36 ಮತಗಟ್ಟೆಗಳಲ್ಲಿ ಮತ್ತು ಹೊರ ಮಣಿಪುರ ಕ್ಷೇತ್ರದಲ್ಲಿ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಒತ್ತಾಯಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ” ಎಂದು ತಿಳಿಸಿದರು.
ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ಮೈತಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿಯೂ ಹಿಂಸಾಚಾರ ನಡೆದಿದ್ದು, ಗುಂಡಿನ ಚಕಮಕಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.