ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

Date:

Advertisements

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.

ಮಾಜಿ ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಅವರು ಎಲ್‌ಜೆಪಿಯನ್ನು ವಿಭಜಿಸಿದಾಗ ಪಾರಸ್ ಪರವಾಗಿ ನಿಂತಿದ್ದ ಕೈಸರ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದಾದ ಬಳಿಕ ರಾಜಿ ಮಾತುಕತೆ ನಡೆದರೂ ಕೂಡಾ ಅದನ್ನು ಒಪ್ಪದ ಕೈಸರ್ ತೇಜಸ್ವಿ ಯಾದವ್ ಸಮ್ಮುಖದಲ್ಲಿ ಆರ್‌ಜೆಡಿ ಸೇರಿದ್ದಾರೆ.

“ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಅವರೊಂದಿಗಿನ ಸಭೆಯ ನಂತರ ಕೈಸರ್ ಸಾಹೇಬ್ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಅವರ ಅನುಭವ ನಮಗೆ ಲಾಭ ನೀಡಲಿದೆ. ಇದು ಬಿಜೆಪಿ ಆಡಳಿತದಲ್ಲಿ ಅಪಾಯಕ್ಕೆ ಸಿಲುಕಿರುವ ನಮ್ಮ ಸಂವಿಧಾನವನ್ನು ರಕ್ಷಿಸುವ ನಮ್ಮ ಹೋರಾಟದ ಪರವಾಗಿ ಬಲವಾದ ಸಂದೇಶವನ್ನು ನೀಡುತ್ತದೆ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರ್‌ ಅನ್ನು ಆಳಿದ ಕುಟುಂಬದಲ್ಲಿ ಜನಿಸಿದ ಕೈಸರ್ ಅವರು ಕಾಂಗ್ರೆಸ್‌ನಲ್ಲಿ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದು 2013 ರವರೆಗೆ ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದರು.ಅವರು 2014 ರಲ್ಲಿ ಎಲ್‌ಜೆಪಿ ಸೇರಿದ್ದು ಐದು ವರ್ಷಗಳ ನಂತರ ಖಗರಿಯಾ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

2020 ರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿಯು ಕೈಸರ್ ಅವರ ಪುತ್ರ ಯೂಸುಫ್ ಸಲಾವುದ್ದೀನ್‌ಗೆ ಟಿಕೆಟ್ ನಿರಾಕರಿಸಿದ ಬಳಿಕ ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಜೊತೆಗಿನ ಕೈಸರ್ ಸಂಬಂಧ ಹದಗೆಡಲು ಆರಂಭವಾಗಿದೆ. 2020ರಲ್ಲಿ ಕೈಸರ್ ಅವರ ಪುತ್ರ ಸಲಾವುದ್ದೀನ್ ಆರ್‌ಜೆಡಿ ಟಿಕೆಟ್‌ನಲ್ಲಿ ಸಿಮ್ರಿ ಭಕ್ತಿಯಾರ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದರು.

ಈಗ 23 ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಆರ್‌ಜೆಡಿ, ಈಗ ಚುನಾವಣೆಯಲ್ಲಿ ಕೈಸರ್ ಅವರನ್ನು ಕಣಕ್ಕಿಳಿಸಲಿದೆಯೇ ಎಂಬ ಚರ್ಚೆಯಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X