ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬ ಭೇಟಿ | ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನ

Date:

Advertisements
  • ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಮಾಧಾನ ಹೇಳಿದ ಸಚಿನ್‌ ಪೈಲಟ್‌
  • ಸಂತ್ರಸ್ತ ಕುಟುಂಬದ ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಸಂಸದ ಕಿರೋಡಿ

ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್ ಅವರು ಇತ್ತೀಚೆಗೆ ಸಂಪುಟ ಸಚಿವ ಮಹೇಶ್‌ ಜೋಷಿ ಅವರನ್ನು ದೂಷಿಸಿ ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತನ ಕುಟುಂಬ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಗುರುವಾರ (ಏಪ್ರಿಲ್‌ 20) ತೆರಳಿದ್ದರು.

ಮೃತ ವ್ಯಕ್ತಿ ರಾಮ್‌ಪ್ರಸಾದ್‌ ತಂದೆಯನ್ನು ಸಚಿನ್‌ ಪೈಲಟ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಕುಟುಂಬದ ಇತರರನ್ನೂ ಪೈಲಟ್‌ ಮಾತನಾಡಿಸಿದ್ದಾರೆ. ಸಚಿನ್ ಪೈಲಟ್‌ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, “ಸಂತ್ರಸ್ತನ ಆತ್ಮಹತ್ಯೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಸತ್ಯಾಂಶ ಬೆಳಕಿಗೆ ಬಂದು ಸಂತ್ರಸ್ತರಿಗೆ ನ್ಯಾಯ ದೊರೆಯಬೇಕು” ಎಂದು ಹೇಳಿದ್ದಾರೆ.

ಸಂತ್ರಸ್ತ ರಾಮ್‌ಪ್ರಸಾದ್‌ ಆತ್ಮಹತ್ಯೆಗೂ ಮುನ್ನ ಹಂಚಿಕೊಂಡ ವಿಡಿಯೋ ಒಂದನ್ನು ಪೈಲಟ್‌ ಉಲ್ಲೇಖಿಸಿದ್ದಾರೆ. 38 ವರ್ಷದ ರಾಮ್‌ಪ್ರಸಾದ್‌ ಮೀನಾ ಅವರು ಭೂ ವಿವಾದಕ್ಕೆ ಸಂಬಂಧಿಸಿದ ಆರೋಪದಲ್ಲಿ ಸೋಮವಾರ (ಏಪ್ರಿಲ್‌ 17) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Advertisements

ಆತ್ಮಹತ್ಯೆಗೂ ಮುನ್ನ ರಾಮ್‌ಪ್ರಸಾದ್‌ ವಿಡಿಯೋ ಮಾಡಿ, “ಭೂ ವಿವಾದಕ್ಕೆ ಸಂಬಂಧಿಸಿ ತಮ್ಮ ಕುಟುಂಬಕ್ಕೆ ಮಹೇಶ್‌ ಜೋಷಿ ಮತ್ತು ಇತರರು ಸಮಸ್ಯೆಗಳನ್ನು ಉಂಟು ಮಾಡಿದ್ದರು. ಆತ್ಮಹತ್ಯೆಗೆ ಅವರೇ ಕಾರಣ” ಎಂದು ಆರೋಪಿಸಿದ್ದರು.

ಆದರೆ ಈ ಆರೋಪಗಳನ್ನು ಮಹೇಶ್‌ ಜೋಷಿ ತಳ್ಳಿಹಾಕಿದ್ದಾರೆ. ಸಚಿನ್‌ ಪೈಲಟ್‌, “ಎಲ್ಲ ಆರೋಪಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ | ದೈಹಿಕ ಸಂಬಂಧ ಮಾತ್ರವಲ್ಲ ಭಾವನಾತ್ಮಕ ಸಂಬಂಧ ಹೊಂದಿದೆ : ಡಿ ವೈ ಚಂದ್ರಚೂಡ್

ಇದಕ್ಕೂ ಮುನ್ನ ಪೈಲಟ್‌ ಅವರ ಆಪ್ತ, ಕಾಂಗ್ರೆಸ್‌ ಶಾಸಕ ಹರೀಶ್‌ ಮೀನಾ ಅವರೂ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಬಿಜೆಪಿಯ ಸಂಸದ ಕಿರೋಡಿ ಲಾಲ್‌ ಮೀನಾ ಸಹ ಪ್ರತಿಭಟನೆಯಲ್ಲಿ ಸೇರಿದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ನೀತಿಗಳನ್ನು ವಿರೋಧಿಸಿ ಬಹಿರಂಗವಾಗಿ ಧ್ವನಿ ಎತ್ತುತ್ತಿರುವ ಸಚಿನ್‌ ಪೈಲಟ್‌ ಅವರ ಇತ್ತೀಚಿನ ನಡೆಗಳು ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನವನ್ನುಂಟು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X