ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

Date:

Advertisements

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು‌ ಸೇರಿದ್ದಾರೆ.  ಇವರೆಲ್ಲರೂ ಹುಬ್ಬಳ್ಳಿಯಿಂದ ಪ್ರವಾಸಕ್ಕೆಂದು ಆಗಮಿಸಿದ್ದರು.

ಕಾಳಿ ನದಿಯಲ್ಲಿ ಈಜಲು ಇಳಿದಾಗ ಆರು ವರ್ಷದ ಮೊಹಿನ್‌ ಅಹಮ್ಮದ್ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಆತನನ್ನು ರಕ್ಷಿಸಲು ಅಲ್ಪಿಯಾ ಅಹಮ್ಮದ್ ( 10) , ಇಫ್ರಾ ಅಹಮ್ಮದ್( 15), ಅಬೀದ್ ಅಹಮ್ಮದ್ (12) ನೀರಲ್ಲಿ ಮುಳುಗಿದರು. ಇವರ ರಕ್ಷಣೆ ಇಳಿದ ತಂದೆ ನಜೀರ್ ಅಹಮ್ಮದ್ (40) , ನಜೀರ್ ಸಹೋದರಿ ರೇಶ್ಮಾ ಉನ್ನೀಸಾ ( 38) ಸಹ ನದಿಯಲ್ಲಿ ಮುಳುಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

Advertisements

ಇವರ ಜೊತೆಗಿದ್ದ ಇಬ್ಬರು ಸುರಕ್ಷಿತವಾಗಿದ್ದಾರೆ. ಇವರು ನದಿಯ ದಡದಲ್ಲಿದ್ದರು ಎನ್ನಲಾಗಿದೆ. ನದಿಯಲ್ಲಿ ಮುಳುಗಿದ ಎಲ್ಲರನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ನಿಂದ ಹೊರಟಿದ್ದರು ;

ನಜೀರ್ ಹಾಗೂ ಅವರ ಸಹೋದರಿ ರೇಶ್ಮಾ ಬೆಂಗಳೂರುನಿಂದ ಹುಬ್ಬಳ್ಳಿಯ ಸಂಬಂಧಿಕರ ಮನೆಗೆ ಭೇಟಿ ನೀಡಿ, ಅಲ್ಲಿಂದ ದಾಂಡೇಲಿ ಮಾರ್ಗವಾಗಿ ಕಾರವಾರಕ್ಕೆ ಬರುವವರಿದ್ದರು‌. ಮಾರ್ಗಮಧ್ಯೆ ಹುಬ್ಬಳ್ಳಿ ಸಂಬಂಧಿಕರ ಮನೆಗೆ ನಜೀರ್ ಅಹಮ್ಮದ್ ಹೋಗಿದ್ದರು. ಹುಬ್ಬಳ್ಳಿ ಯಿಂದ ಕಾರವಾರಕ್ಕೆ ಬರುವವರಿದ್ದರು. ಮಾರ್ಗಮಧ್ಯೆ ಬಿರಯಂಪಯಲಿ ಗ್ರಾಮ ಅಕೋಡಾ ಬಳಿ ಕಾಳಿ ನದಿ ನೋಡಲು ಇಳಿದಿದ್ದಾರೆ. ಇದು ಅತ್ಯಂತ ದುರ್ಗಮ ಪ್ರದೇಶ. ಇಲ್ಲಿ ನದಿಯಲ್ಲಿ ಈಜಲು ಯಾರೂ ಹೋಗದ ಸ್ಥಳವೆಂದು ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ.

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X