ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

Date:

Advertisements

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಎಲ್ಲ ರಾಜ್ಯಗಳಿಗೆ ತೆರಳಿ, ಎನ್‌ಡಿಎ ಪರ ಮತಯಾಚನೆ ನಡೆಸುತ್ತಿದ್ದಾರೆ.

ಇಂದು ರಾಜಸ್ಥಾನದ ಬನ್ಸ್‌ವಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಮಾವೇಶದಲ್ಲಿ ಪ್ರಧಾನಿ ಮೋದಿಯೇ ಖುದ್ದು ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದಿದ್ದು, ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅಲ್ಲದೇ, ತಮ್ಮ ಭಾಷಣದಲ್ಲಿ ಧರ್ಮವನ್ನು ಎಳೆದು ತರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಮ್ ಸಮುದಾಯವನ್ನು ಎಳೆದು ತಂದ ಮೋದಿ, “ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ” ಎಂದು ಹೇಳಿಕೆ ನೀಡಿದ್ದಾರೆ. ಸುಮಾರು ಒಂದೂವರೆ ನಿಮಿಷದ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವಿವಾದ ಎಬ್ಬಿಸಿದೆ.

Advertisements

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ, “ಈ ದೇಶದ ಸಂಪತ್ತಿನ ಮೊದಲ ಅಧಿಕಾರ ಇರುವುದು ಮುಸ್ಲಿಮರಿಗೆ ಎಂದು ಈ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಇದರ ಅರ್ಥ ಏನೆಂದರೆ, ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಯಾರಿಗೆ ಹೆಚ್ಚು ಮಕ್ಕಳಿದ್ದಾರೋ ಅವರಿಗೆ ನೀಡುವುದಾಗಿದೆ. ನುಸುಳುಕೋರರಿಗೆ ಹಂಚಲಿದೆ. ನೀವು ಕಷ್ಟಪಟ್ಟು ದುಡಿದು ಗಳಿಸಿದ ಸಂಪತ್ತು, ಹಣವನ್ನು ನುಸುಳುಕೋರರಿಗೆ ನೀಡಬೇಕೇ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯೇ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳುತ್ತಿದೆ. ದೇಶದ ಜನರ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅವುಗಳನ್ನು ಕಾಂಗ್ರೆಸ್ ಮುಸ್ಲಿಮರಿಗೆ ನೀಡಲಿದೆ. ಇದು ನಗರ ನಕ್ಸಲರ ಯೋಚನೆಯಾಗಿದೆ. ನಮ್ಮ ಹೆಣ್ಣು ಮಕ್ಕಳ ಮಂಗಳಸೂತ್ರ ಕೂಡ ಉಳಿಯುವುದಿಲ್ಲ. ಅಲ್ಲಿಯವರೆಗೂ ಬೇಕಾದರೆ ಕಾಂಗ್ರೆಸ್ ಹೋಗಬಹುದು ಎಂದು ನಾನು ಹೇಳಬಯಸುತ್ತೇನೆ” ಎಂದು ವಿವಾದಾತ್ಮಕ ಹಾಗೂ ದ್ವೇಷ ಭಾಷಣಗೈದಿದ್ದಾರೆ.

“ಬಿಜೆಪಿಗೆ ಇದು ವಿನಾಶಕಾರಿ. ಮೊದಲ ಹಂತದ ಮತದಾನದ ನಂತರ ನರೇಂದ್ರ ಮೋದಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದ್ದಾರೆ. ಮತ್ತೊಮ್ಮೆ ಧರ್ಮದ ಹೆಸರಿನಲ್ಲಿ ಮತ ಕೇಳಿದ್ದಾರೆ. ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಜನರ ವೈಯಕ್ತಿಕ ಆಸ್ತಿಗಳನ್ನು ಕಸಿದುಕೊಳ್ಳುತ್ತದೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದು 10 ವರ್ಷಗಳ ಕಾಲ ನಮ್ಮ ದೇಶವನ್ನಾಳಿದ ಪ್ರಧಾನಿಯ ಸ್ಥಿತಿ. ಇವರ ಮನಸ್ಥಿತಿ ಊಹಿಸಿ. ಮೋದಿಯವರಿಂದ ಇದು ತೀರಾ ಹತಾಶೆಯ ಮಾತು. ಚುನಾವಣಾ ಆಯೋಗವು ಇನ್ನೂ ನಿದ್ರಿಸುವುದನ್ನು ಮುಂದುವರೆಸಿದರೆ ಬಹಳ ಕಷ್ಟವಿದೆ” ಎಂದು ನೆಟ್ಟಿಗರೊಬ್ಬರು ವಿಡಿಯೋ ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಈ ವೀಡಿಯೋ ವೈರಲಾಗಿದ್ದು, ಚುನಾವಣಾ ಆಯೋಗವು ನಿದ್ರಿಸುತ್ತಿದೆಯೇ ಎಂದು ನೆಟ್ಟಿಗರು ಹಾಗೂ ವಿಪಕ್ಷಗಳ ಮುಖಂಡರು ಪ್ರಶ್ನಿಸುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X