ಬೆಳಗಾವಿ | ಹಿಂದುತ್ವವಾದಿ ಕಾರ್ಯಕರ್ತರ ಅನೈತಿಕ ಪೊಲೀಸ್‌ ಗಿರಿ; ಲಾರಿ ಚಾಲಕನ ಮೇಲೆ ಹಲ್ಲೆ

Date:

Advertisements

ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ ಸುವರ್ಣಸೌಧ ಎದುರು ಹಿಂದುತ್ವವಾದಿ ಕೋಮು ಕಾರ್ಯಕರ್ತರು ತಡೆದಿದ್ದಾರೆ. ಲಾರಿ ಮೇಲೆ ಕಲ್ಲು ತೂರಾಟ ನಡೆಸಿ, ದಾಂಧಲೆ ನಡೆಸಿದ್ದಾರೆ. ಹಿಂದುತ್ವವಾದಿಗಳ ದಾಂಧಲೆಯನ್ನು ಪ್ರಶ್ನಿಸಿದ ಲಾರಿ ಚಾಲನ ಉಮರ್​ ಮೋಯಿದ್ದೀನ್​​ ಮೇಲೆ ಹಲ್ಲೆ ನಡೆಸಿದ್ದಾರೆ.

ಲಾರಿ ಚಾಲಕ ಉಮರ್ ತಲೆ, ಬೆನ್ನು, ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

“ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ, ಲಾರಿ ಎಲ್ಲಗೆ ಹೋಗುತ್ತಿತ್ತು ಎಂಬ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಅಕ್ರಮವಾಗಿ ಗೋವು ಸಾಗಿಸುತ್ತಿದ್ದರೆ, ಆ ಬಗ್ಗೆಯೂ ಪ್ರಕರಣ ದಾಖಲಿಸುತ್ತೇವೆ” ಎಂದು ಡಿಸಿಪಿ ಹೇಳಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, “ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X