ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ

Date:

Advertisements

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್‌ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್‌ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು.

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisements

ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದು, ಅವರ ಜೊತೆ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.

ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್‌ ಪಡೆಯುವುದು ಬಹುತೇಕ ಖಚಿತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದರೆ ಪ್ರಲ್ಹಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ. ಜೊತೆಗೆ ಜೋಶಿಗೂ ರಿಲೀಫ್‌ ಸಿಕ್ಕಂತಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X