ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಚುನಾವಣಾ ಆಯೋಗ ಸಮ್ಮತಿ, ಶೀಘ್ರವೇ ಹಣ ಬಿಡುಗಡೆ; ಸುಪ್ರೀಂಗೆ ಕೇಂದ್ರ ಮಾಹಿತಿ

Date:

Advertisements

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ನೀಡಲಾಗಿದೆ. ಕರ್ನಾಟಕಕ್ಕೆ ಮೋಸವಾಗಿಲ್ಲವೆಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರ ಸಮರ್ಥನೆ ಸುಪ್ರೀಂ ಕೋರ್ಟ್‌ ಮುಂದೆ ಬಟಾಬಯಲಾಗಿದೆ. ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಕ್ಕೆ ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿ (NDRF)ಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಕೇಂದ್ರ ಸರ್ಕಾರದ ಹಲವು ಇಲಾಖೆಗಳ ಅಧಿಕಾರಿಗಳ ತಂಡ ರಾಜ್ಯ ಭೇಟಿ ನೀಡಿ, ವರದಿ ಸಲ್ಲಿಸಿ ಆರು ತಿಂಗಳಾಗಿವೆ. ಆದರೂ, ಬರ ಪರಿಹಾರ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರದ ಧೋರಣೆಯಿಂದ ಕರ್ನಾಟಕದ ಜನರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಅಂತ್ಯಂತ ಶೋಚನೀಯವಾಗಿದೆ. ಪರಿಣಾಮ, ಅನಿವಾರ್ಯವಾಗಿ ನ್ಯಾಯಾಲಯದ ಮೆಟ್ಟಿಲೇರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಸರ್ಕಾರ ತಿಳಿಸಿತ್ತು.

Advertisements

ಸುಪ್ರೀಂ ನ್ಯಾಯಮೂರ್ತಿಗಳಾದ ಬಿ.ಆರ್.‌ ಗವಾಯಿ ಮತು ಸಂದೀಪ್‌ ಮೆಹ್ತಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನೆಲೆಸಬಾರದು. ರಾಜ್ಯಗಳು ಪದೇಪದೇ ಸುಪ್ರೀಂ ಕೋರ್ಟಿಗೆ ಬರುವಂತಾಗಬಾರದು ಎಂದು ಹೇಳಿದೆ.

ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ, “ಶೀಘ್ರವೇ ಬರ ಪರಿಹಾರ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X