ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

Date:

Advertisements
  • ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆ
  • ಎಸ್‌ಯುಸಿಐ ಗೆಲ್ಲಿಸುವಂತೆ ಮನವಿ

ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಕರ್ತರ ಸಭೆ ನಡೆದಿದೆ. ಮಧುಲತಾ ಅವರಿಗೆ ಮತ ನೀಡುವಂತೆ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣನವರ ಮಾತನಾಡಿ, “ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಮಧುಲತಾ ಗೌಡರ್ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕಣದಲ್ಲಿದ್ದಾರೆ. ಇದುವರೆಗೂ ಆಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿ ಪರವಾದ ಪಕ್ಷಗಳಾಗಿವೆ. ಎಸ್‌ಯುಸಿಐ ದೇಶದ ಬಡ ರೈತ ಕೃಷಿ ಕಾರ್ಮಿಕರ ಪಕ್ಷವಾಗಿದ್ದು, ಅವರ ಪರವಾದ ಹಲವಾರು ಹೋರಾಟಗಳನ್ನು ಕಟ್ಟುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? : ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

Advertisements

“ರೈತ ಕೃಷಿ-ಕಾರ್ಮಿಕರ ಪರವಾದ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು, ಕಾಮ್ರೇಡ ಮಧುಲತಾ ಗೌಡರ್ ಅವರನ್ನು ಗೆಲ್ಲಿಸುವ ಪಣ ತೊಡಬೇಕು” ಎಂದು ಕರೆ ನೀಡಿದರು.

ಸಭೆಗೆ ಆಗಮಿಸಿದ ಎಲ್ಲ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಚುನಾವಣಾ ಪ್ರಚಾರವನ್ನು ಕೈಗೊಳ್ಳುವುದಾಗಿ ದೃಢ ನಿರ್ಧಾರ ಕೈಗೊಂಡರು. ಈ ವೇಳೆ ಜಿಲ್ಲಾ ಸಮಿತಿ ಸದಸ್ಯ ದೀಪಾ ಧಾರವಾಡ, ಸಮಿತಿ ಸದಸ್ಯ ಹನುಮೇಶ ಹುಡೇದ, ಪಕ್ಷದ ಬೆಂಬಲಿಗರು ಬಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ಧಾರವಾಡ | ಕ್ವಾರಿ ಕೆಲಸದ ವೇಳೆ ಸರಕಾರಿ ನಿಯಮಗಳನ್ನು ಪಾಲಿಸಬೇಕು: ಅಕ್ಬರ್ ಮುಲ್ಲಾ

ಕ್ವಾರಿ ಕೆಲಸ ಅಪಾಯಕಾರಿ ಎಂದು ನಮಗೆಲ್ಲರಿಗೂ ಗೊತ್ತು. ಇಲ್ಲಿ ಸಣ್ಣ ತಪ್ಪು...

Download Eedina App Android / iOS

X