ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

Date:

Advertisements

“ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕರೆ ನೀಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ಎಂ.ವಿ. ರಾಜೀವ್ ಗೌಡ ಅವರ ಪರವಾಗಿ ಸೋಮವಾರ ಬಿರುಸಿನ ಪ್ರಚಾರ ನಡೆಸಿ, ಬಳಿಕ ಮಾತನಾಡಿದ ಅವರು, “ಕೇಂದ್ರದಲ್ಲಿ ಮಂತ್ರಿಯಾಗಿದ್ದರೂ ಸಹ ಶೋಭಾ ಕರಂದ್ಲಾಜೆ ನಯಾಪೈಸೆಯ ಅಭಿವೃದ್ಧಿ ಕೆಲಸ ಮಾಡಲಿಲ್ಲ” ಎಂದು ಹರಿಹಾಯ್ದರು.

“ಅವರ ಕ್ಷೇತ್ರದ ಜನರೇ ನೀವು ನಮಗೆ ಬೇಡ ಎಂದು ಪ್ರತಿಭಟಿಸಿ ಶೋಭಾ ಕರಂದ್ಲಾಜೆಯನ್ನು ಕ್ಷೇತ್ರದಿಂದ ಹೊರಗಟ್ಟಿದ್ದಾರೆ, ಅಂಥವರನ್ನು ತಂದು ಬೆಂಗಳೂರು ಉತ್ತರದಲ್ಲಿ ನಿಲ್ಲಿಸಿದ್ದಾರೆ, ಆದರೆ, ಈ ಕ್ಷೇತ್ರದ ಜನರು ಬುದ್ದಿವಂತರು, ಯಾರಿಗೂ ಬೇಡಾದ ದ ಬಿಜೆಪಿ ಅಭ್ಯರ್ಥಿಯನ್ನ ಮತ್ತೆ ಆಯ್ಕೆ ಮಾಡಲು ನಮ್ಮ ಜನ ದಡ್ಡರಲ್ಲ. ಮತದಾನದ ದಿನದಂದು ಕಾಂಗ್ರೆಸ್‌ನ ರಾಜೀವ್‌ ಗೌಡ ಅವರಿಗೆ ಮತ ಹಾಕುವ ಮೂಲಕ ಶೋಭಾ ಕರಂದ್ಲಾಜೆಯನ್ನು ಸೋಲಿಸಬೇಕು” ಎಂದು ಕರೆಕೊಟ್ಟರು.

Advertisements

“ಬಿಜೆಪಿಗೆ ಈ ಬಾರಿ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೇ ಅವರದೇ ಪಕ್ಷದ 12 ಎಂಪಿಗಳಿಗೆ ಈ ಬಾರಿ ಟಿಕೆಟ್‌ ನೀಡಿಲ್ಲ, ಸೋಲು ಭಯ ಅವರನ್ನು ಕಾಡುತ್ತಿದೆ. ಹೀಗಾಗಿಯೇ ಜನರು ಸಹ ಬಿಜೆಪಿಯನ್ನು ಸೋಲಿ ಕಾಂಗ್ರೆಸ್‌ ಕೈ ಹಿಡಿಬೇಕು. ರಾಜೀವ್‌ ಗೌಡ ಅವರು ಪ್ರೊಫೆಸರ್‌ ಆಗಿದ್ದವರು, ಅವರಿಗೆ ಮತದಾರರ ಮಿಡಿತ ಅರ್ಥವಾಗಲಿದೆ, ಹೀಗಾಗಿ ಎಲ್ಲರೂ ರಾಜೀವ್‌ ಗೌಡ ಅವರನ್ನೇ ಗೆಲ್ಲಿಸಿ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X