ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

Date:

Advertisements

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟಿಸಿರುವ ರಾಮ್‌ದೇವ್ ಅವರನ್ನು ಈಗ ಸುಪ್ರೀಂ ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ನಡೆಸಿದೆ. ಈ ವಿಚಾರಣೆಯ ಸಂದರ್ಭದಲ್ಲಿ ಪತಂಜಲಿ ಆಯುರ್ವೇದ್, “67 ಪತ್ರಿಕೆಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸಲಾಗಿದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ತಪ್ಪುಗಳು ಪುನರಾವರ್ತನೆ ಆಗಲ್ಲ” ಎಂದು ಹೇಳಿದೆ.

ಇದನ್ನು ಓದಿದ್ದೀರಾ?  ನೀವು ಅಷ್ಟೊಂದು ಮುಗ್ಧರೇನಲ್ಲ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ

Advertisements

ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, “ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ” ಎಂದು ಪ್ರಶ್ನಿಸಿದೆ.

“ನೀವು ದಿನಪತ್ರಿಕೆಯಲ್ಲಿ ನೀಡಿದ ಕ್ಷಮಾಪಣೆಯನ್ನು ಕತ್ತರಿಸಿ ನೀವೇ ಇಟ್ಟುಕೊಳ್ಳಿ. ಅದನ್ನು ದೊಡ್ಡದಾಗಿಸಿ ಫೋಟೊಕಾಪಿ ಮಾಡಿಕೊಳ್ಳಿ. ಅದು ನಮ್ಮನ್ನು ಮೆಚ್ಚಿಸಲಾರದು. ನಾನು ಜಾಹೀರಾತಿನ ನಿಜವಾದ ಗಾತ್ರವನ್ನು ನೋಡಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.


ಇದನ್ನು ಓದಿದ್ದೀರಾ?  ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್

“ನಮ್ಮ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ ನಂತರವೂ ಜಾಹೀರಾತುಗಳನ್ನು ಪ್ರಕಟಿಸಿ ಮತ್ತು ಪತ್ರಿಕಾಗೋಷ್ಠಿ ನಡೆಸಿದ ತಪ್ಪಿಗೆ ಪತಂಜಲಿ ಕ್ಷಮೆಯಾಚಿಸಿದೆ. ಜಾಹೀರಾತಿಗೆ 10 ಲಕ್ಷ ರೂಪಾಯಿ ವೆಚ್ಚವಾಗಿದೆ” ಎಂದು ಪತಂಜಲಿ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೊಂಡಿದೆ.

ಬಾಬಾ ರಾಮದೇವ್ ಮತ್ತು ಅವರ ಪಾಲುದಾರ ಆಚಾರ್ಯ ಬಾಲಕೃಷ್ಣ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X