ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

Date:

Advertisements

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿತು.

ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ ಸುರ್ಜೇವಾಲ, ಸಚಿವರಾದ ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಮೊದಲು ಬರ ಪರಿಹಾರ ನೀಡಿದ ಬಳಿಕ ಅಮಿತ್ ಶಾ ರಾಜ್ಯ ಪ್ರಚಾರಕ್ಕೆ ಆಗಮಿಲಿ” ಎಂದಿ ಆಗ್ರಹಿಸಿದರು.

Advertisements

“ಅಮಿತ್ ಶಾ ಅವರಿಗೆ ಕರ್ನಾಟಕದಲ್ಲಿ ಓಟ್ ಕೇಳುವ ನೈತಿಕತೆ ಇಲ್ಲ. ದ್ರದ ಮಲತಾಯಿ ಧೋರಣೆ ವಿರೋಧಿಸಿ ಸಾಂಕೇತಿಕ ಪ್ರತಿಭಟನೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕರ್ನಾಟಕ ಹಾಗೂ ಕರ್ನಾಟಕದ ರೈತರನ್ನು ದ್ವೇಷ ಮಾಡುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂಬ ಬೇಡಿಕೆಗೆ ಸ್ಪಂದಿಸಿಲ್ಲ. ಈ ಕಾರಣಕ್ಕಾಗಿ ಪ್ರತಿಭಟನೆ ಮಾಡಿದ್ದೇವೆ” ಎಂದರು.

“ಬರದಿಂದಾಗಿ 48,000 ಹೆಕ್ಟೇರ್ ಬೆಳೆ ನಷ್ಟವಾಗಿದೆ. ರೈತರಿಗೆ ಮೊದಲು ಕಂತು ಎರಡು ಸಾವಿರ ಬಿಡುಗಡೆ ಮಾಡಿದ್ದೆವು. ರೂ.650 ಕೋಟಿ ಬಿಡುಗಡೆ ಮಾಡಿ ರೈತರಿಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ. ನಾವು ಬರಗಾಲವನ್ನು ಸಮರ್ಥವಾಗಿ ಎದುರಿಸಿದ್ದೇವೆ. ರೂ. 18,170 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದೇವೆ. ಮನವಿ ಮಾಡಿದ್ದೇವೆ. ಆದರೆ ಇವತ್ತಿನವರೆಗೆ ಕೇಂದ್ರ ಸರ್ಕಾರ ಒಂದು ರೂಪಾಯಿ ಕೊಟ್ಟಿಲ್ಲ” ಎಂದು ಕಿಡಿಕಾರಿದರು.

“ಬರ ಪರಿಹಾರಕ್ಕೆ ಸೆಪ್ಟೆಂಬರ್ ನಲ್ಲಿ ಮನವಿ ಸಲ್ಲಿಕೆ ಮಾಡಿದ್ದೇವೆ. ಕೇಂದ್ರ ತಂಡ ಪರಿಶೀಲನೆ ಮಾಡಿ ವರದಿ ಕೊಟ್ಟಿದ್ದಾರೆ.‌ ಕರ್ನಾಟಕದಲ್ಲಿ ಭೀಕರ ಬರಗಾಲ ಇದೆ. ಆದರೆ ಅಮಿತ್ ಶಾ ಅವರು ಕರ್ನಾಟಕ ಸರ್ಕಾರ ಮನವಿ ವಿಳಂಬವಾಗಿ ನೀಡಿದರು ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗೆ ದುಡ್ಡು ಕೇಳ್ತಿದ್ದಾರೆ ಬರಗಾಲಕ್ಕೆ ಅಲ್ಲ ಎಂದು ನಿರ್ಮಲಾ ಹೇಳಿದ್ದಾರೆ. ಗ್ಯಾರಂಟಿಗೆ ನಮ್ಮ ರಾಜ್ಯದ ಸಂಪನ್ಮೂಲಗಳಿಂದ ಕೊಟ್ಟಿದ್ದೇವೆ” ಎಂದರು.

“ಕರ್ನಾಟಕಕ್ಕೆ ಬರಲು ಯಾವುದೇ ನೈತಿಕತೆ ಇಲ್ಲ,ಯಾವ ಮುಖ ಹೊತ್ತು ಬರ್ತಿದ್ದೀರಿ? ಬಜೆಟ್ ನಲ್ಲಿ ಭದ್ರಾ ಮೇಲ್ಡಂಡೆ ಯೋಜನೆಗೆ ರೂ.5300 ಬಿಡುಗಡೆ ಮಾಡುತ್ತೇವೆ, ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ಆದರೆ ಈವರೆಗೂ ಈಡೇರಿಸಿಲ್ಲ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X