ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

Date:

Advertisements
  • ಶೆಟ್ಟರ್‌ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
  • ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್‌ ನಿಗಾ

ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ತೊರೆದು, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ವಿರುದ್ಧ ಟಿಕೆಟ್‌ ತಪ್ಪಲು ಅವರೇ ಕಾರಣ ಎಂದು ಆರೋಪ ಮಾಡಿದ ನಂತರ, ಅದನ್ನು ಬಿಜೆಪಿ ಮತ್ತು ಸಂಘ ಪರಿವಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ ಶೆಟ್ಟರ್ ಅವರನ್ನು ವಿಧಾನಸಭೆಗೆ ಆಯ್ಕೆಯಾಗದಂತೆ ನೋಡಿಕೊಳ್ಳಲು ಕ್ಷೇತ್ರದೊಳಗೆ ರಣತಂತ್ರ ಹೆಣೆಯುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

Advertisements

ಹೇಗಾದರೂ ಮಾಡಿ ಈ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲು ಮತ್ತು ತಮ್ಮ ಮತಬ್ಯಾಂಕ್​ ಅನ್ನು​ ಮತ್ತಷ್ಟು ಭದ್ರಪಡಿಸಿಕೊಳ್ಳಲು ಆರ್​ಎಸ್​​ಎಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ.

ನಾಗ್ಪುರದಿಂದ ಸುಮಾರು 50 ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿ ವಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಮೂಲಕ ಬಿಜೆಪಿ ಹಲವು ತಂತ್ರಗಳನ್ನು ಜಗದೀಶ್‌ ಶೆಟ್ಟರ್‌ ಸುತ್ತ ಹೆಣೆದಿದೆ.

ಶೆಟ್ಟರ್‌ ಮೇಲೆ ಗೂಡಾಚಾರಿಕೆ

ನಾಗ್ಪುರದಿಂದ ಬಂದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ. ಶೆಟ್ಟರ್ ಅವರ ಪ್ರತಿಯೊಂದು ನಡೆಯನ್ನು ಅವರು ಸೂಕ್ಷ್ಮವಾಗಿ ಗಮನಿಸಲು ಈಗಾಗಲೇ ಆ ವಿಶೇಷ ಪಡೆ ಆರಂಭಿಸಿದ್ದು, ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೂ ನಿಗಾ ಇಟ್ಟಿದ್ದಾರೆ.

ಬಿ ಎಲ್ ಸಂತೋಷ್ ಅವರನ್ನು ಟೀಕಿಸಿದ್ದಕ್ಕೆ ಆರ್​ಎಸ್​​ಎಸ್ ಸಹ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಹೀಗಾಗಿ ಶೆಟ್ಟರ್ ಚಲನವಲನದ ಮೇಲೆ ರಹಸ್ಯವಾಗಿ ಕಣ್ಣಿಟ್ಟಿರುವ ಆರ್​​ಎಸ್​​ಎಸ್ ಕಾರ್ಯಕರ್ತರ ತಂಡ, ಈ ಬಾರಿ ಹೇಗಾದರೂ ಮಾಡಿ ಶೆಟ್ಟರ್‌ ಅವರನ್ನು ಮಣಿಸಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಪಣತೊಟ್ಟಿದೆ ಎನ್ನಲಾಗುತ್ತಿದೆ.

ಈ ನಡುವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X