ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

Date:

Advertisements

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು ಮುಂಡರಗಿ ತಾಲೂಕು ಪಂಚಾಯತಿ ಮುಂದಾಗಿದೆ. ಜತೆಗೆ ಕೃಷಿ ಕಾರ್ಮಿಕರನ್ನು ಸೆಳೆಯಲು ಕೆಲಸ ಮುಗಿಸಿದ ನಂತರ ದೇಸಿ ಆಟಗಳನ್ನು ಆಡಿಸಲಾಗುತ್ತಿದೆ. ಮಹಿಳಾ ಕಾರ್ಮಿಕರಿಂದ ಸೋಬಾನ ಪದ (ಜನಪದ ಹಾಡು) ಹಾಡಿಸಿ ಮನರಂಜನೆಯನ್ನೂ ನೀಡಲಾಗುತ್ತಿದೆ. ಜೊತೆಗೆ ಕಬ್ಬಡ್ಡಿ, ಖೋಖೋ ಕ್ರೀಡೆಗಳನ್ನೂ ಆಡಿಸುತ್ತಿದೆ.

ದುಡಿಯುವ ಕೂಲಿಕಾರರಿಗೆ ಮನರಂಜನೆಯು ಮುಖ್ಯ. ಮಳೆಗಾಲ ಮರೀಚಿಕೆಯಾದ ಈ ದಿನಗಳ ನಡುವೆ ನರೇಗಾ ಯೋಜನೆ ಗ್ರಾಮೀಣ ಜನರಿಗೆ ದಾರಿದೀಪ. ಇದನ್ನು ಮನಗಂಡ ಮುಂಡರಗಿ ತಾಲೂಕು ಪಂಚಾಯತಿ ಸುಸ್ಥಿರ ನರೇಗಾ ಅಂಕಿ ಸಂಖ್ಯೆ ಅಭಿವೃದ್ಧಿಯತ್ತ ಸಾಂಸ್ಕೃತಿಕ, ಜನಪದ ಚಟುವಟಿಕೆಗಳ ಮೂಲಕ ಗಮನಹರಿಸಿ ಜನರಿಗೆ ಮಾಹಿತಿ ತಲುಪಿಸುತ್ತಿರುವುದು ಮಾದರಿಯಾಗಿದೆ.

ಪುರುಷರಿಗಿಂತ ಗ್ರಾಮೀಣ ಪ್ರದೇಶದ ಮಹಿಳೆಯರೇ ಈ ಆಟದಲ್ಲಿ ಹೆಚ್ಚು ತೊಡಗಿರುವುದು ಗಮನಿಸತಕ್ಕ ಅಂಶ. ಹಾಗಾಗಿ ಮುಂಡರಗಿ ತಾಲೂಕು ಪಂಚಾಯತ ಕಳೆದ ವರ್ಷ ನರೇಗಾ ಕಾಮಗಾರಿಗಳಲ್ಲಿ ಮಹಿಳಾ ಭಾಗವಹಿಸುವಿಕೆ ಪ್ರಮಾಣದಲ್ಲಿ ಶೇಕಡಾ 50% ರಷ್ಟು ಯಶಸ್ಸು ಸಾಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Advertisements

“ಮನರೇಗಾ ಕಾಮಗಾರಿಗಳ ಜೀವನಾಡಿಯಾಗಿದೆ. ಭಾರತ ಹಳ್ಳಿಗಳಿಂದ ಕೂಡಿದ ದೇಶ. ಬೇಸಿಗೆ ಕಾಲದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಸಿಕ್ಕರೆ ಆಗುವ ಅನುಕೂಲ ನೂರೆಂಟು. ಆ ದಿಶೆಯಲ್ಲಿ ಮುಂಡರಗಿ ತಾಪಂ ಕಾರ್ಯನಿರತವಾಗಿದೆ” ಎಂದು ಮುಂಡರಗಿ ತಾಲೂಕು ಪಂಚಾಯಿತಿ ಇಓ ವಿಶ್ವನಾಥ ಹೊಸಮನಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X