ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

Date:

Advertisements

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಪ್ರಧಾನಿಯವರ ಈ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಿರುವ ಬೆಳವಣಿಗೆ ನಡೆದಿದೆ.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ಜನರ ನಡುವೆ ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದಾರೆ.

Advertisements

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ಅಭಿಪ್ರಾಯ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

ಈ ವಿಡಿಯೋ ವೈರಲ್ ಆದ ನಂತರ, ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಉಸ್ಮಾನ್ ಘನಿ ಅವರನ್ನು ಉಚ್ಚಾಟಿಸಲಾಗಿದೆ. ‘ದ್ವೇಷ ಭಾಷಣ ಬೇಡ’ ಎಂದು ಸಲಹೆ ನೀಡಿದ್ದಕ್ಕೆ ಬಿಜೆಪಿ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.

‘ಪಕ್ಷದ ವರ್ಚಸ್ಸು ಹಾಳು ಮಾಡಿದ್ದಕ್ಕಾಗಿ ಈ ಕ್ರಮ’ ಎಂದ ಬಿಜೆಪಿ!

ಈ ಬಗ್ಗೆ ಪ್ರಕಟಣೆ ಹೊರಟಿಸಿರುವ ರಾಜಸ್ಥಾನ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್, “ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಜೆಪಿಯ ವರ್ಚಸ್ಸು ಹಾಳು ಮಾಡಿದ್ದಕ್ಕಾಗಿ, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪಕ್ಷದ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X