ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

Date:

Advertisements

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗ್ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂದು ಹೇಳಿರುವ ಶೃತಿ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಶಕ್ತಿ ಸಿಂಧು ಮಹಿಳಾ ಸಮಾವೇಶದಲ್ಲಿ ಹೇಳಿಕೆ ನೀಡಿದ ಅವರು, “ದಿನ ನಿತ್ಯ ಗಂಡಸರು ಅಳತಾ ಇದ್ದಾರೆ. ನನ್ನ ಹೆಂಡತಿ ಎಲ್ಲಿ ಹೋದ್ಲು ಅಂತ, ಮಕ್ಕಳು ಮನೇಲಿ ಉಪವಾಸ ಬಿದ್ದಿದ್ದಾರೆ ಅಂತ ಗೋಳಾಡುತ್ತಿದ್ದಾರೆ. ಫ್ರೀ ಬಸ್‌ ಕೊಟ್ಟ ತಕ್ಷಣ ಮಹಿಳೆಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ. ತೀರ್ಥಯಾತ್ರೆ ಹೋಗಬೇಕು ಅನ್ನುವ ನೆಪದಲ್ಲಿ ಎಲ್ಲಿಗೆ ಹೋಗಬೇಕು ಅನ್ನೋದು ಗೊತ್ತಿಲ್ಲ. ಗೊತ್ತು ಗುರಿಯಿಲ್ಲದೆ ಇರುವ ಹಾಗೇ ಮಾಡಿದ್ದಾರೆ” ಎಂದಿದ್ದಾರೆ.

”ಫ್ರೀ ಬಸ್‌ ಹೆಸರಿನಲ್ಲಿ ನಾವು ಯಾವತ್ತು ಸಂಸ್ಕೃತಿ ದಾಟಿದ್ದೆ ಇಲ್ಲ. ಹೆಣ್ಣು ಮಕ್ಕಳ ಮೇಲೆ ಯಾವಾಗಲೂ ಒಂದು ದೂಷಣೆ ಇದೆ. ಆದರೆ, ನಾವು ಹೆಣ್ಣು ಮಕ್ಕಳು ಜಗಳ ಆಡಿದ್ದು ಇತಿಹಾಸದಲ್ಲೇ ಇಲ್ಲ. ಆದರೆ ಕೆಲವರು ಸೀಟ್‌ಗೋಸ್ಕರ ಜುಟ್ಟು ಹಿಡಿದುಕೊಂಡು ಜಗಳ ಆಡೋ ಹಾಗೇ ಮಾಡಿದ್ದಾರೆ. ಆಟೋ ಓಡಿಸೊ ಜನರು ಕಣ್ಣೀರು ಹಾಕತಾ ಇದಾರೆ” ಎಂದು ಹೇಳಿದ್ದಾರೆ.

Advertisements

”ಯಾವುದೇ ಯೋಜನೆ ಕೊಟ್ಟರೂ ಅದು ಮಹಿಳೆಯರ ರಕ್ಷಣೆಗೆ ಕೊಡಬೇಕೇ ಹೊರತು ಕೇವಲ ಆಕರ್ಷಣೆಗೋಸ್ಕರ ಆಗಿರಬಾರದು. ಭಾರತದ ಸಂಸ್ಕೃತಿ, ಪರಂಪರೆಯ ಲಕ್ಷ್ಮಣ ರೇಖೆಯನ್ನ ನೀವು ದಾಟಿ ಹೋದರೇ, ಕಾಂಗ್ರೆಸ್‌ ಪಕ್ಷದವರು ನಿಮ್ಮನ್ನು ಅಪಹರಣ ಮಾಡುತ್ತಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

”ಯಾಕೆ ಕಾಂಗ್ರೆಸ್‌ ಅವರು ಕೇವಲ ಹೆಣ್ಣುಮಕ್ಕಳನ್ನು ಟಾರ್ಗೆಟ್‌ ಮಾಡಿ ಈ ರೀತಿಯ ಯೋಜನೆ ಕೊಡತಾ ಇದಾರೆ ಎಂಬ ಬಗ್ಗೆ ಯೋಚನೆ ಮಾಡಿ” ಎಂದರು.

ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ವೈ ರಾಘವೇಂದ್ರ, ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಈ ವೇಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X