ಬೆದರಿಕೆ ಪ್ರಕರಣ : ನಟ ಸುದೀಪ್‌ ಮಾಜಿ ಕಾರು ಚಾಲಕನ ವಿಚಾರಣೆ

Date:

Advertisements

ಖಾಸಗಿ ವಿಡಿಯೋ ಹರಿ ಬಿಡುವುದಾಗಿ ಅಪರಿಚಿತರಿಂದ ಬೆದರಿಕೆ

ಬೆದರಿಕೆ ಪತ್ರದ ಹಿಂದಿರುವ ವ್ಯಕ್ತಿಯ ಬಗ್ಗೆ ಗೊತ್ತು ಎಂದಿದ್ದ ಸುದೀಪ್‌

ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಟ ಸುದೀಪ್‌ ಅವರ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. ಆದರೆ, ಸುದೀಪ್‌ ಅವರಿಗೆ ಬಂದಿರುವ ಬೆದರಿಕೆ ಪತ್ರಗಳಿಗೂ ಆತನಿಗೂ ಯಾವುದೇ ಸಂಬಂಧವಿಲ್ಲ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.

Advertisements

ಇತ್ತೀಚೆಗೆ ಸುದೀಪ್‌ ಅವರ ಪುಟ್ಟೇನಹಳ್ಳಿ ನಿವಾಸಕ್ಕೆ ಅಪರಿಚಿತರಿಂದ ಎರಡು ಬೆದರಿಕೆ ಪತ್ರಗಳು ಬಂದಿದ್ದವು. ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದರು. ಈ ಸಂಬಂಧ ಸುದೀಪ್‌ ಅವರ ಆಪ್ತ ಸಹಾಯಕ ಜಾಕ್‌ ಮಂಜು ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದರು. ಜೊತೆಗೆ ನಟನ ಮಾಜಿ ಕಾರು ಚಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದಾದ ಕೆಲ ದಿನಗಳ ನಂತರ ಪ್ರಕರಣ ಸಿಸಿಬಿಗೆ ವರ್ಗಾವಣೆಗೊಂಡಿತ್ತು.

ಈ ಹಿನ್ನೆಲೆ ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸುದೀಪ್‌ ಅವರ ಮಾಜಿ ಕಾರು ಚಾಲಕನ್ನು ಕರೆದು ವಿಚಾರಣೆಗೆ ನಡೆಸಿದ್ದು, ಆತನ ಮೊಬೈಲ್‌ ಅನ್ನು ಕೂಡ ಪರಿಶೀಲಿಸಿದ್ದಾರೆ. ಆದರೆ, ಆತ 3 ವರ್ಷಗಳ ಹಿಂದೆಯೇ ಸುದೀಪ್‌ ಬಳಿ ಕೆಲಸ ಬಿಟ್ಟಿರುವುದಾಗಿ ತಿಳಿಸಿದ್ದಾನೆ. ಸುದೀರ್ಘ ವಿಚಾರಣೆಯ ಬಳಿಕ ಆತನಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಸುದ್ದಿ ಓದಿದ್ದೀರಾ? ‘ಟ್ವಿಟರ್‌ ಬ್ಲೂಟಿಕ್‌’ಗೆ ಬೈ ಹೇಳಿದ ಪ್ರಕಾಶ್‌ ರಾಜ್‌

ಬೆದರಿಕೆ ಪತ್ರದ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಸುದೀಪ್‌, “ಸಿನಿಮಾ ರಂಗದವರೇ ಬೆದರಿಕೆ ಪತ್ರ ಕಳುಹಿಸಿದ್ದಾರೆ. ಈ ಕೃತ್ಯದ ಹಿಂದಿರುವ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ ಎಂದಿದ್ದರು. ಆದರೆ, ಪ್ರಕರಣ ದಾಖಲಾಗಿ ತಿಂಗಳು ಕಳೆಯುತ್ತ ಬಂದರೂ ಆರೋಪಿಗಳ ಸುಳಿವಿಲ್ಲ. ಹೀಗಾಗಿ ಸುದೀಪ್‌ ಅವರಿಗೆ ಬೆದರಿಕೆ ಹಾಕಿದವರ ಬಗ್ಗೆ ಮಾಹಿತಿ ಎಂದಾದರೆ, ಅವರು ಪೊಲೀಸರಿಗೆ ತಿಳಿಸಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಕಳೆದ ಮಾರ್ಚ್‌ನಲ್ಲಿ ದೊಮ್ಮಲೂರಿನ ಅಂಚೆ ಕಚೇರಿಗೆ ನಕಲಿ ನಂಬರ್‌ ಪ್ಲೇಟ್‌ ಹೊಂದಿದ್ದ ಸ್ವಿಫ್ಟ್‌ ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಂಚೆ ಡಬ್ಬದಲ್ಲಿ ಪತ್ರವನ್ನು ಹಾಕಿ ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ಕೆಲ ದಿನಗಳ ಬಳಿಕ ಅಂಚೆ ಸೇವೆಯ ಮೂಲಕ ಪತ್ರ ಸುದೀಪ್‌ ಅವರ ನಿವಾಸ ತಲುಪಿತ್ತು. ಖಾಸಗಿ ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಪತ್ರ ಕೈಸೇರಿದ ಬೆನ್ನಲ್ಲೇ ಹೈಕೋರ್ಟ್‌ ಮೊರೆ ಹೋಗಿದ್ದ ಸುದೀಪ್‌, ತಮ್ಮ ಘನತೆಗೆ ಧಕ್ಕೆಯುಂಟು ಮಾಡುವ ಸುದ್ದಿಗಳ ಪ್ರಸಾರಕ್ಕೆ ತಡೆಯಾಜ್ಞೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X