ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

Date:

Advertisements

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು ತಿಳಿದು ಬಂದಿದೆ ಎಂದು ಬುಧವಾರ ಸುಪ್ರೀಂ ಕೋರ್ಟ್‌ಗೆ ಇಡಿ ತಿಳಿಸಿದೆ.

ಇಡಿ ತನ್ನ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿಗೆ ಪ್ರತಿಕ್ರಿಯೆಯಾಗಿ ಇಡಿ ಅಫಿಡವಿಟ್ ಸಲ್ಲಿಸಿದೆ. ಒಂಬತ್ತು ಸಮನ್ಸ್‌ಗಳ ಹೊರತಾಗಿಯೂ ತನಿಖಾಧಿಕಾರಿಯ ಮುಂದೆ ಹಾಜರಾಗದೆ ಎಎಪಿ ನಾಯಕ ಕೇಜ್ರಿವಾಲ್ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಕೇಂದ್ರ ಸಂಸ್ಥೆ ಆರೋಪಿಸಿದೆ.

ಈ ನಡುವೆ ಎಎಪಿ ಅಫಿಡವಿಟ್‌ಗೆ ಪ್ರತಿಕ್ರಿಯಿಸಿದ್ದು ಏಜೆನ್ಸಿಯನ್ನು “ಸುಳ್ಳು ಹೇಳುವ ಯಂತ್ರ” ಎಂದು ಕರೆದಿದೆ. “ಇಡಿ ಸುಳ್ಳನ್ನು ಹೇಳುವ ಯಂತ್ರವಾಗಿ ಮಾರ್ಪಟ್ಟಿದೆ. ಪ್ರತಿ ಬಾರಿಯೂ ಇಡಿ ತಮ್ಮ ಯಜಮಾನರಾದ ಬಿಜೆಪಿಯ ಇಚ್ಛೆಗೆ ತಕ್ಕಂತೆ ಹೊಸ ಸುಳ್ಳುಗಳನ್ನು ಹೊರತರುತ್ತದೆ” ಎಂದು ಹೇಳಿದೆ.

Advertisements

ಇದನ್ನು ಓದಿದ್ದೀರಾ?  ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ಇನ್ನು ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ಅನರ್ಹವಾಗಿದ್ದು ಅದನ್ನು ವಜಾಗೊಳಿಸಿ ಎಂದು ಇಡಿ ಸುಪ್ರೀಂ ಕೋರ್ಟ್‌ ಮುಂದೆ ಹೇಳಿದೆ. ಹಾಗೆಯೇ ಮೂರು ವಿಭಿನ್ನ ಹಂತಗಳಲ್ಲಿ ಮೂರು ವಿಭಿನ್ನ ನ್ಯಾಯಾಂಗ ಅಧಿಕಾರಿಗಳು (ನ್ಯಾಯಾಲಯಗಳು) ಅರವಿಂದ್ ಕೇಜ್ರಿವಾಲ್ ಬಂಧನ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ ಎಂದು ಇಡಿ ಅಫಿಡವಿಟ್‌ನಲ್ಲಿ ಸೇರಿಸಿದೆ.

ದೆಹಲಿ ಸಿಎಂ ಅವರ ಮನವಿಯು ಜಾಮೀನಿನ ಮೇಲೆ ಬಿಡುಗಡೆ ಪಡೆಯುವ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ ಪ್ರಾಸಿಕ್ಯೂಷನ್ ದೂರು ಇನ್ನೂ ದಾಖಲಾಗದಿದ್ದರೂ ತನಿಖೆಯ ಬಾಕಿ ಇರುವಾಗ ಬಂಧನವನ್ನು ಪ್ರಶ್ನಿಸುವ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮನವಿಯಾಗಿದೆ ಎಂದು ಇಡಿ ವಾದಿಸಿದೆ.

ಇದನ್ನು ಓದಿದ್ದೀರಾ? ‘ನನ್ನ ಪತಿಯ ಹತ್ಯೆಗೆ ಸಂಚು’: ದೆಹಲಿ ಸಚಿವರ ನಂತರ ಕೇಜ್ರಿವಾಲ್ ಪತ್ನಿ ಆರೋಪ

“ಈ ಸಂಬಂಧವಾಗಿ, ಅರ್ಜಿದಾರರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣ ಇಲ್ಲ” ಎಂದು ಹೇಳಿರುವ ಇಡಿ ಬಂಧನವು ದುರುದ್ದೇಶಪೂರಿತವಾಗಿದೆ ಎಂಬುವುದನ್ನು ಸ್ಪಷ್ಟವಾಗಿ ನಿರಾಕರಿಸಲಾಗಿದೆ. ಅರ್ಜಿದಾರರ ವಾದಗಳು ಮಾತ್ರ ಆಧಾರರಹಿತ. ಅಸ್ಪಷ್ಟವಾಗಿದೆ ಮತ್ತು ನಿರ್ದಿಷ್ಟವಾಗಿಲ್ಲ ಎಂದು ಇಡಿ ಹೇಳಿದೆ.

ಈ ಬಂಧನವು ತನಿಖೆಯ ಭಾಗವಾಗಿದೆ, ತನಿಖೆಯ ಸಮಯದಲ್ಲಿ ಬಂಧನ ಮಾಡುವುದು ತನಿಖಾ ಸಂಸ್ಥೆಗೆ ಬಿಟ್ಟದ್ದು ಎಂದು ಸಂಸ್ಥೆ ಅಫಿಡವಿಟ್‌ನಲ್ಲಿ ತಿಳಿಸಿದೆ. ಅಷ್ಟೇ ಅಲ್ಲ, 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆರೋಪಿ (ಕೇಜ್ರಿವಾಲ್) ತಪ್ಪಿತಸ್ಥರಾಗಿದ್ದಾರೆ ಎಂದು ನಂಬಲು ತಮ್ಮ ಬಳಿ ಸಾಕಷ್ಟು ಸಾಕ್ಷಿ ಇದೆ ಎಂದು ಇಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X