ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

Date:

Advertisements

“ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು ಉದ್ವಿಗ್ನತೆ ಹುಟ್ಟಿಸಿ ತನ್ನ ಹತಾಶೆಯನ್ನು ತೋರಿಸುತ್ತಿರುವ ಬಿಜೆಪಿಗೆ ಆತಂಕ ಉಂಟು ಮಾಡಿದೆ” ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಾದ ಕುಲ್‌ಗಾಮ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟದ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದು, ಇದರಿಂದ ಎನ್‌ಡಿಎ ಕಂಗೆಟ್ಟಿದೆ. ಇಂಡಿಯಾ ಮೈತ್ರಿ ಉತ್ತಮ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ ದೇಶದ ಅಭ್ಯುದಯಕ್ಕೆ ಸಹಕಾರಿ: ಅನಿಲ್ ಕುಮಾರ್ ತಡಕಲ್

Advertisements

ಅನಂತನಾಗ್-ರಾಜೌರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಮುಫ್ತಿ ಅವರು, “ಬಡವರು, ನಿರುದ್ಯೋಗಿ ಯುವಕರು ಮತ್ತು ರೈತರ ಬಗ್ಗೆ ಮಾತನಾಡುವ ಇಂತಹ ಉತ್ತಮ, ಜನಪರ ಪ್ರಣಾಳಿಕೆ 70 ವರ್ಷಗಳಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದೆ” ಎಂದು ಅಭಿಪ್ರಾಯಿಸಿದರು.

“ಈ ಜನಪರ ಪ್ರಣಾಳಿಕೆಯು ಬಿಜೆಪಿ ನಾಯಕರನ್ನು ವಿಚಲಿತಗೊಳಿಸಿದೆ. ಅದಕ್ಕಾಗಿ ಬಿಜೆಪಿ ನಾಯಕರು ಹಿಂದೂ-ಮುಸ್ಲಿಂ ಉದ್ವಿಗ್ನತೆಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ” ಎಂದರು.

ಹಾಗೆಯೇ, “ದಬ್ಬಾಳಿಕೆಗೆ ಮತದಾನವೇ ಉತ್ತರವಾಗಿದೆ. ಬಂದೂಕು ಅಥವಾ ಕಲ್ಲುಗಳಲ್ಲ” ಎಂದು ಹೇಳಿದರು. “ಇಂದು ನಾವು ಮೌನವಾಗಿದ್ದರೆ, ನಮ್ಮ ಮುಂದಿನ ಪೀಳಿಗೆಗೆ ಏನೂ ಉಳಿಯದು. ಮತದಾನ, ಬಂದೂಕು ಅಥವಾ ಕಲ್ಲು ಅಲ್ಲ. ದಬ್ಬಾಳಿಕೆಗೆ ಉತ್ತರ ಮತದಾನ. ಬಂದೂಕು ಮತ್ತು ಕಲ್ಲುಗಳು ನಮ್ಮ ಸ್ಮಶಾನವನ್ನು ತುಂಬಿಸುತ್ತದೆ. ನಮ್ಮ ಮಕ್ಕಳನ್ನು ಅನಾಥರನ್ನಾಗಿ ಮತ್ತು ನಮ್ಮ ಹೆಂಗಸರನ್ನು ವಿಧವೆಯರನ್ನಾಗಿ ಮಾಡುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X