ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

Date:

Advertisements

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ವರದಿಯಾಗಿದೆ.

ಡಿಎಸ್‌ಪಿ (ಕಾನೂನು ಮತ್ತು ಸುವ್ಯವಸ್ಥೆ) ಕೃಷ್ಣ ಮುರಾರಿ ಮಾತನಾಡಿ, “5-6 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಲಾಗಿದೆ. 7 ಮಂದಿಗೆ ಗಂಭೀರವಾಗಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ, “16 ಸಾವಿರಕ್ಕೂ ಹೆಚ್ಚು ಹೊಟೇಲ್‌ಗಳಲ್ಲಿ ಅಗ್ನಿಶಾಮಕ ಪರಿಶೋಧನೆ ನಡೆಸಲಾಗಿದೆ, ಇನ್ನೂ ಪ್ರಗತಿಯಲ್ಲಿದೆ. ಪರಿಶೋಧನೆಯ ವೇಳೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಆದರೆ ಕೆಲವರು ಆ ಸೂಚನೆಗಳನ್ನು ಅನುಸರಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್

“ನಾವು ನೀಡಿದ ಸೂಚನೆಗಳನ್ನು ಕೆಲವರು ಅನುಸರಿಸಿದರೆ, ಇನ್ನೂ ಕೆಲವರು ಸೂಚನೆಗೆ ಗಮನ ಹರಿಸುವುದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬರುತ್ತದೆ” ಎಂದು ತಿಳಿಸಿದ್ದಾರೆ.

“ನಾವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿದೆ. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಪತ್ತೆಹಚ್ಚಲಾಗುವುದು ಮತ್ತು ಸೂಕ್ತವಾದ ಕ್ರಮವನ್ನು ಅನುಸರಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X