ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

Date:

Advertisements

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ ಎಂದು ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು “ಲೋಕಸಭೆ ಚುನಾವಣೆ ಈಗಾಗಲೇ ತನ್ನ ಕೈ ತಪ್ಪಿದೆ ಎಂಬುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ತಿಳಿದಿದೆ” ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಕಾಂಗ್ರೆಸ್‌ನ ಗ್ಯಾರಂಟಿ ಹಿಂದೂಸ್ತಾನದ ಜನರಿಗಾಗಿ ಇರುವ ಸರ್ಕಾರವಾಗಿದೆ. ಆದರೆ ಮೋದಿ ಅವರ ಗ್ಯಾರಂಟಿ ಅದಾನಿಯವರ ಸರ್ಕಾರವಾಗಿದೆ” ಎಂದಿದ್ದಾರೆ.

ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ವಿವರಿಸಿರುವ ರಾಹುಲ್ ಗಾಂಧಿ ಅವರು, “ಮಹಿಳೆಯರಿಗೆ ಮಾಸಿಕವಾಗಿ 8,500 ರೂಪಾಯಿ ನೀಡುವುದು, ಯುವಕರಿಗೆ ವಾರ್ಷಿಕ ಒಂದು ವರ್ಷ ವೇತನ ಲಭಿಸುವ ಉದ್ಯೋಗ ನೀಡುವುದು, 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದು, ರೈತರಿಗೆ ಎಂಎಸ್‌ಪಿಗಾಗಿ ಕಾನೂನು ಮಾಡುವುದು ಕಾಂಗ್ರೆಸ್‌ನ ಗ್ಯಾರಂಟಿ” ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

ಆದರೆ ಮೋದಿ ಅವರ ಗ್ಯಾರಂಟಿ ಅದಾನಿ ಪರವಾದುದ್ದು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ಕೋಟ್ಯಾಧಿಪತಿಗಳ ಜೇಬಿನಲ್ಲಿ ದೇಶದ ಸಂಪತ್ತು, ಚಂದಾ ದಂಧೆ ನಡೆಸುವ ವಸೂಲಿ ಗ್ಯಾಂಗ್, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕೊನೆ ಮಾಡುವುದು, ಪ್ರತಿ ಪೈಸೆಯನ್ನು ರೈತರು ಲೆಕ್ಕ ಹಾಕುವಂತಹ ಪರಿಸ್ಥಿತಿ ಸೃಷ್ಟಿ ಮಾಡುವುದು ಬಿಜೆಪಿಯ ಗ್ಯಾರಂಟಿ” ಎಂದು ಹೇಳಿದರು.

“ಇಲ್ಲಿ ವ್ಯತ್ಯಾಸ ಸ್ಪಷ್ಟವಾಗಿದೆ! ಕಾಂಗ್ರೆಸ್ ಭಾರತದಲ್ಲಿ ಕೋಟ್ಯಂತರ ಮಿಲಿಯನೇರ್‌ಗಳನ್ನು ಸೃಷ್ಟಿಸುತ್ತದೆ ಮತ್ತು ಚುನಾವಣೆ ತನ್ನ ಕೈ ತಪ್ಪಿ ಹೋಗಿದೆ ಎಂದು ಮೋದಿಗೆ ತಿಳಿದಿದೆ” ಎಂದರು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X