ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

Date:

Advertisements

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) – ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು – ಉಲ್ಲಂಘಿಸಲು ಒತ್ತಾಯಿಸಿದರೆ ದೇಶವನ್ನು ತೊರೆಯುವುದಾಗಿ ವಾಟ್ಸಾಪ್‌ ಹೇಳಿದೆ. ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ಅನ್ನು ಪ್ರಶ್ನಿಸಿ 2021ರಲ್ಲಿಯೇ ವಾಟ್ಸಾಪ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ವೇದಿಕೆಯು ಉಲ್ಲಂಘಿಸುವಂತೆ ಒತ್ತಾಯಿಸಿದರೆ, ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನೇ ನಿಲ್ಲಿಸುತ್ತದೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ.

“ಖಾಸಗಿತನದ ಗೌಪ್ಯತೆಯ ಕಾರಣಕ್ಕಾಗಿ ಜನರು ವಾಟ್ಸಾಪ್‌ಅನ್ನು ಬಳಸುತ್ತಿದ್ದಾರೆ. ಕೇಂದ್ರ ಸರ್ಕಾರದ ಹೊಸ ನಿಯಮವು ಬಳಕೆದಾರರ ಗೌಪ್ಯತೆಯನ್ನು ಮುರಿಯುತ್ತದೆ. ವಾಟ್ಸಾಪ್‌ ಶತಕೋಟಿ ಸಂದೇಶಗಳನ್ನು ಸಂಗ್ರಹಿಸಬಹುದಾದ ವೇದಿಕೆಯಾಗಿದೆ. ವಾಟ್ಸಾಪ್‌ನಲ್ಲಿ ಯಾವುದೇ ಮಿತಿಯಿಲ್ಲಲ. ಹೀಗಾಗಿ, ನಮ್ಮ ಮೇಲೆ, ಬಳಕೆದಾರರ ಸಂದೇಶಗಳನ್ನು ಪದೇ ಪದೆ ಕೇಳಲಾಗುತ್ತದೆ” ಎಂದು ವಾದಿಸಿದ್ದಾರೆ.

Advertisements

“ಇಲ್ಲಿ ಎರಡು ವಿಚಾರಗಳಿವೆ – ಒಂದು, ಬಳಕೆದಾರರ ಖಾಸಗಿತನ – ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X