ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

Date:

Advertisements

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯರೊಬ್ಬರು ಮಹಿಳೆಯ ಜೀವ ಉಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈವರೆಗೆ 19.2ರಷ್ಟು ಮತದಾನವಾಗಿದೆ. ಬೆಳಿಗ್ಗೆ 11ರ ಸುಮಾರಿಗೆ ಮಹಿಳೆ ಮತದಾನ ಮಾಡಲು ಬಂದಿದ್ದರು. ಈ ವೇಳೆ ಮಹಿಳೆಯ ಹೃದಯ ಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ ಗಣೇಶ್ ಶ್ರೀನಿವಾಸ ಪ್ರಸಾದ್ ಜೀವ ಉಳಿಸಿದ್ದಾರೆ.

“50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ನಾನು ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿರುವುದು ಕಂಡುಬಂದಿತು. ಕಣ್ಣುಗಳನ್ನು ಮೇಲಕ್ಕೆತ್ತಿ ಏಕಾಏಕಿ ನೆಲಕ್ಕೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಅವರು ಉಸಿರುಗಟ್ಟುತ್ತಿದ್ದರು” ಎಂದು ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

“ಅಸ್ವಸ್ಥವಾಗುತ್ತಿದ್ದ ಮಹಿಳೆಯನ್ನು ಕಂಡು ನಾನು ಕೂಡಲೇ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು, ಬಳಿಕ ಅವರ ಸ್ಥಿತಿ ಸುಧಾರಿಸಿತು. ಚುನಾವಣಾ ಕರ್ತವ್ಯದಲ್ಲಿದ್ದವರು ಕೂಡಲೇ ಧಾವಿಸಿ ಜ್ಯೂಸ್ ನೀಡಿದರು. ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ಕೂಡಾ ಅವರ ಜೀವಕ್ಕೆ ಅಪಾಯ ಉಂಟಾಗುತ್ತಿತ್ತು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X