ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

Date:

Advertisements

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡುವ ಮೂಲಕ ವಿನೂತನ ದಾಖಲೆ ಸೃಷ್ಟಿಸಿದೆ. ಹಾಲಿನ ಉತ್ಪನ್ನಗಳಷ್ಟೇ ಅಲ್ಲದೆ, ಕೆಎಂಎಫ್​ನ ಐಸ್‌ಕ್ರೀಮ್‌ಗಳೂ ಕೂಡ ಕಳೆದ ವರ್ಷಕ್ಕಿಂತ ಶೇ.40ರಷ್ಟು ಹೆಚ್ಚು ಮಾರಾಟವಾಗಿವೆ. ಈ ಬಾರಿ ಈವರೆಗಿನ ಅತ್ಯಧಿಕ ಐಸ್​ಕ್ರೀಮ್ ಮಾರಾಟವಾಗಿರುವುದಾಗಿ ವರದಿಯಾಗಿದೆ.

“ಏಪ್ರಿಲ್ ಸಮಯದಲ್ಲಿ, ವಿಶೇಷವಾಗಿ ಏಪ್ರಿಲ್ 9 ಮತ್ತು 15ರ ನಡುವೆ ಯುಗಾದಿ, ರಾಮನವಮಿ ಮತ್ತು ಈದ್-ಉಲ್-ಫಿತರ್‌ನಂತಹ ಹಬ್ಬಗಳು ಒಂದರ ನಂತರ ಒಂದರಂತೆ ಬಂದಿದ್ದರಿಂದ ಕೂಡಾ ಮಾರಾಟ ಹೆಚ್ಚಳಕ್ಕೆ ಕಾರಣವಾಗಿದೆ. ಹಾಲು ಮತ್ತು ಮೊಸರು ಪ್ಯಾಕೆಟ್‌ಗಳು ಬೇಗನೆ ಬಿಕರಿಯಾಗುವುದನ್ನು ಈ ವರ್ಷ ಕಾಣಬಹುದು. ಸಾಮಾನ್ಯವಾಗಿ, ಸಂಸ್ಥೆಯು ದಿನಕ್ಕೆ ಎರಡು ಬಾರಿ ಉತ್ಪನ್ನಗಳನ್ನು ಪೂರೈಸುತ್ತದೆ. ಆದರೆ ಕೆಲವು ಪ್ರದೇಶಗಳಲ್ಲಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಬಾರಿ ಉತ್ಪನ್ನಗಳನ್ನು ಪೂರೈಸಲಾಗಿದೆ. ಹೆಚ್ಚುತ್ತಿರುವ ತಾಪಮಾನ ಕೂಡ ಮಾರಾಟದಲ್ಲಿ ಏರಿಕೆಗೆ ಕಾರಣ” ಎಂದು ಕೆಎಂಎಫ್​​ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಐಸ್‌ಕ್ರೀಂ ಮಾರಾಟದಲ್ಲಿ ಶೇ 40ರಷ್ಟು ಏರಿಕೆ

Advertisements

“ಈ ಹಿಂದೆ ದಿನಕ್ಕೆ ನಂದಿನಿ ಹಾಲು ಮಾರಾಟ 44 ಲಕ್ಷ ಲೀಟರ್ ದಾಟಿರಲಿಲ್ಲ. ಆದರೆ ಈ ವರ್ಷ ಒಂದೇ ದಿನದಲ್ಲಿ 48 ಲಕ್ಷ ಲೀಟರ್‌ ಮಾರಾಟವಾಗಿದೆ. ಮೊಸರು ಮತ್ತು ಮಜ್ಜಿಗೆ ಕೂಡ ಗಮನಾರ್ಹ ಮಾರಾಟ ದಾಖಲಿಸಿವೆ. ಈ ತಿಂಗಳು, ನಾವು ಮೊಸರು ಮಾರಾಟದಲ್ಲಿ ಎರಡು ಮೈಲಿಗಲ್ಲುಗಳನ್ನು ದಾಟಿದ್ದೇವೆ. ಮೊದಲ ವಾರದಲ್ಲಿ, ನಾವು 11.5 ಲಕ್ಷ ಲೀಟರ್ ಮಾರಾಟ ದಾಖಲಿಸಿದ್ದೇವೆ ಮತ್ತು ಐದು ದಿನಗಳಲ್ಲಿ 16.5 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಇದರಿಂದ ನಂದಿನಿ ಆದ್ಯತೆಯ ಬ್ರ್ಯಾಂಡ್ ಆಗಿರುವುದು ತಿಳಿದುಬರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

“ಕೆಎಎಂಎಫ್ ಐಸ್ ಕ್ರೀಮ್ ಮಾರಾಟವು ಶೇ.40ರಷ್ಟು ಹೆಚ್ಚಾಗಿದ್ದು, ನಿರಂತರವಾಗಿ ಸುಧಾರಿಸುತ್ತಿದೆ. ಐಸ್ ಕ್ರೀಂಗಳು ಒಂದು ವರ್ಷಕ್ಕೂ ಹೆಚ್ಚು ಶೆಲ್ಫ್-ಲೈಫ್ ಹೊಂದಿರುತ್ತವೆ. ಹೀಗಾಗಿ ನಾವು ಬೇಗನೆ ಉತ್ಪಾದನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X