ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

Date:

Advertisements

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ಬರೋಬ್ಬರಿ 2,172 ಚುನಾವಣಾ ಅಕ್ರಮ ಪ್ರಕರಣಗಳನ್ನು ದಾಖಲು ಮಾಡಿದೆ.

ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೊರೆಗಳನ್ನು ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ಜಪ್ತಿ ಮಾಡಿದೆ. ಅಬಕಾರಿ ಇಲಾಖೆ 3,098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ. ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4,789 ಪ್ರಕರಣ, ಎನ್​ಡಿಪಿಎಸ್​ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಎಫ್​ಎಸ್​ಟಿ ತಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋರಮಂಗಲದಲ್ಲಿ ₹18.82 ಲಕ್ಷ, ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆಜಿಎಫ್​ನ ಬೇತಮಂಗಲದಲ್ಲಿ ₹47.56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಮೈಸೂರಿನ ಕಾಳಿದಾಸನಹುಂಡಿ ಚೆಕ್​​ಪೋಸ್ಟ್​​ನಲ್ಲಿ ₹81.90 ಲಕ್ಷ, ಬೆಂಗಳೂರಿನ ರಾಯನ್ ಸರ್ಕಲ್ ಚೆಕ್​​​ಪೋಸ್ಟ್​ನಲ್ಲಿ ₹20 ಲಕ್ಷ, ಉಡುಪಿ ಜಿಲ್ಲೆ ಕುಂದಾಪುರದಲ್ಲಿ ₹43.34 ಲಕ್ಷ ಜಪ್ತಿ ಮಾಡಲಾಗಿದೆ. ಈ ನಡುವೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕದ ಮಾದನಾಯಕನಹಳ್ಳಿ ಬಳಿ ₹4.80 ಕೋಟಿ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಮೊದಲ ಹಂತದ ಮತದಾನದಲ್ಲಿ ಶೇ.69 ರಷ್ಟು ಮತದಾನವಾಗಿದೆ. ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X