ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

Date:

Advertisements

“ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಕಾಂಗ್ರೆಸ್ ಲೆಕ್ಕ ಕೊಡಲಿ” ಎಂದು ಆಗ್ರಹಿಸಿದರು.

“ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್‌ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ” ಎಂದರು.

Advertisements

“ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು” ಎಂದರು.

“ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು‌. ನೇರ ನಗದು ಪಾವತಿ(ಡಿಬಿಟಿ) ಮೂಲಕವೇ ನೇರವಾಗಿ ಪರಿಹಾರ ನೀಡಬೇಕು” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

“ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ” ಎಂದು ದೂರಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X