Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

Date:

Advertisements

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಬಂಗಲೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪ್ರಿಯಾಂಕಾ ಗಾಂಧಿ ಅವರು ಈ ಬಂಗಲೆಯನ್ನು ಕಾನೂನುಬಾಹಿರವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಿಯಾಂಕಾ ಅವರ ಬಂಗಲೆಯ ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ ಬೆಂಬಲಿಗ ಮಿ. ಸಿನ್ಹಾ (ಮೋದಿ ಫ್ಯಾಮಿಲಿ) ಎಂಬವರು, “ಶಿಮ್ಲಾದ ಈ ಬೃಹತ್ ಬಂಗಲೆ ಪ್ರಿಯಾಂಕಾ ವಾದ್ರಾ ಅವರಿಗೆ ಸೇರಿದ್ದು. ಈ ಕಣಿವೆಯಲ್ಲಿ ಯಾವುದೇ ಹೊರಗಿನವರಿಗೆ ಮನೆ ನಿರ್ಮಿಸಲು ಅವಕಾಶವಿಲ್ಲ. ಆದರೂ, ರಾಜಮನೆತನದ ನಿಯಮಗಳು ಯಾವಾಗಲೂ ವಿಭಿನ್ನವಾಗಿರುತ್ತವೆ. ಹೇಗಾದರೂ ಸರಿ, ಸಂಪತ್ತಿನ ಪುನರ್‌ ವಿತರಣೆ ಯೋಜನೆಯಡಿ ನನಗೆ ಈ ಬಂಗಲೆ ಬೇಕು. ಪ್ರಿಯಾಂಕಾಗಾಂಧಿ ತಪ್ಪು ತಿಳಿಯುವುದಿಲ್ಲವೆಂದು ಭಾವಿಸುತ್ತೇವೆ” ಎಂದಿದ್ದಾರೆ.

 

ಸಿನ್ಹಾ ಮಾಡಿರುವ ಆರೋಪ ಸತ್ಯಾಸತ್ಯತೆಗಳೇನು ನೋಡೋಣ..

Advertisements
ಪ್ರತಿಪಾದನೆ: ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿ ಅಕ್ರಮವಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖರೀದಿಸಿದ್ದಾರೆ.
ಸತ್ಯ: ಮನೆಯು ಅಕ್ರವಾಗಿದೆ ಎಂಬ ಆರೋಪ ಸುಳ್ಳು. ಅಲ್ಲಿ ಪ್ರಿಯಾಂಕಾ ಖರೀದಿಸಿದ ಭೂಮಿ ಕಾನೂನುಬಾಹಿರವಲ್ಲ…!

ಪ್ರಿಯಾಂಕಾ ಅವರ ಬಂಗಲೆಯು ಕಾನೂನುಬಾಹಿರವಾಗಿದೆ ಎಂಬ ಹೇಳಿಕೆಗಳು ಕಾಂಗ್ರೆಸ್‌ ಪ್ರಣಾಳಿಕೆಯನ್ನು ಅಪಹಾಸ್ಯ ಮಾಡುವ ಉದ್ದೇಶವನ್ನು ಹೊಂದಿವೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ‘ಸಂಪತ್ತನ್ನು ಪುನರ್ ವಿತರಣೆ’ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ ಎಂದು ಭಾವಿಸಿ, ಕೆಲವರು ಇಂತಹ ಹೇಳಿಕೆಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ. ಆದರೆ, ವಾಸ್ತವ ಏನೆಂದರೆ, ಕಾಂಗ್ರೆಸ್‌ ‘ಸಂಪತ್ತು ಪುನರ್‌ ವಿತರಣೆ’ಯ ಬಗ್ಗೆ ಯಾವುದೇ ಭರವಸೆಯನ್ನೂ ತನ್ನ ಪ್ರಣಾಳಿಕೆಯಲ್ಲಿ ನೀಡಿಲ್ಲ.

ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಖರೀದಿಸಿದ ಭೂಮಿ ಕಾನೂನುಬಾಹಿರವಲ್ಲ. ಈ ಬಗ್ಗೆ ನ್ಯೂಸ್‌ಚೆಕರ್ 2020ರ ಸೆಪ್ಟೆಂಬರ್ 14ರಲ್ಲಿಯೇ ಫ್ಯಾಕ್ಟ್‌ಚೆಕ್ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಭೂಮಿ ಖರೀದಿಯ ಕೆಲವು ನಿಮಯಗಳನ್ನು ಸಡಿಲಿಸಲಾಗಿದೆ. ಹೀಗಾಗಿ, ಕಾನೂನಾತ್ಮಕವಾಗಿಯೇ ಅಲ್ಲಿ ಪ್ರಿಯಾಂಕಾ ಬಂಗಲೆಯನ್ನು ಖರೀದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X