ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

Date:

Advertisements

“ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಕೊಟ್ಟಿದೆ. ಆದರೆ ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ” ಎಂದು ಹಿರಿಯ ಸಾಹಿತಿ, ಕನ್ನಡದ ಸಾಕ್ಷಿ ಪ್ರಜ್ಞೆ ದೇವನೂರ ಮಹಾದೇವ ಅವರು ಪ್ರತಿಕ್ರಿಯಿಸಿದ್ದಾರೆ.

ಪರಿಹಾರ ಘೋಷಣೆಯಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, “ಇಷ್ಟು ಅಲ್ಪ ಸ್ವಲ್ಪ ಹಣ ಕೊಡುವುದಕ್ಕೂ ಮೊದಲು ಮೋದಿ, ಅಮಿತ್ ಶಾ, ನಿರ್ಮಲಾ ಸೀತಾರಾಮನ್‌ ಮತ್ತು ಕರ್ನಾಟಕ ರಾಜ್ಯ ಬಿಜೆಪಿಯವರು ನವರಂಗಿ ಬಣ್ಣಬಣ್ಣದ ಆಟ ಆಡಿದರು; ಕರ್ನಾಟಕದ ಜುಟ್ಟಿಗೆ ಸುಳ್ಳಿನ ಹೂ ಮುಡಿಸಿದರು. ಸುಪ್ರೀಂ ಕೋರ್ಟ್ ಹೇಳಿದ ಮೇಲೆ ಆ ಆದೇಶ ಪಾಲಿಸಲೇಬೇಕಾಯ್ತು. ಅಲ್ಲಿ ಅವರ ಆಟ ನಡೆಯಲಿಲ್ಲ. ಅವರು ಈಗಲೂ ಸುಳ್ಳಿನ ಸುರುಸುರು ಬತ್ತಿ ಹಚ್ಚಬಹುದು. ಆದರೆ ಕರ್ನಾಟಕ ಜನತೆಗೆ ಸತ್ಯ ತಿಳಿದಿದೆ ಎಂಬ ನಂಬಿಕೆ ನನಗಿದೆ” ಎಂದು ಹೇಳಿದ್ದಾರೆ.

“ಈಗಾಲಾದರೂ ರಾಜ್ಯ ಬಿಜೆಪಿ ನಾಯಕರು ಮೋದಿ ಮುಂದೆ ಕೈ- ಬಾಯಿ ಕಟ್ಟಿಕೊಂಡು ನಿಲ್ಲುವ ಬದಲು ಕನಿಷ್ಠ ಬಾಯಿ ಬಿಡಲಿ. ಇಲ್ಲದಿದ್ದರೆ ಅವರಿಗೆ ಕರ್ನಾಟಕದವರು ಅನ್ನಿಸಿಕೊಳ್ಳುವ ಕನಿಷ್ಠ ಅರ್ಹತೆ ಇರುವುದಿಲ್ಲ, ನೆನಪಿರಲಿ” ಎಂದು ಎಚ್ಚರಿಸಿದ್ದಾರೆ.

Advertisements

6 5

ತನ್ನ ಬೆನ್ನು ತಾನೇ ತಟ್ಟಿಕೊಳ್ಳುತ್ತಿರುವ ಬಿಜೆಪಿ

ಬರ ಪರಿಹಾರ ಕೈಪಿಡಿ ನಿಗದಿ ಮಾಡಿರುವ ದಿನಾಂಕಕ್ಕಿಂತ ಮೊದಲೇ ಬರ ಘೋಷಣೆ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ಚುನಾವಣೆ ಘೋಷಣೆಯಾದ ಬಳಿಕ, “ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ತಡವಾಗಿ ಮನವಿ ಮಾಡಿದೆ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ, ಅದು ನೀಡುವ ಸೂಚನೆಯನ್ನು ಪಾಲಿಸಲಾಗುವುದು” ಎಂದು ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು ಸುಳ್ಳು ಹೇಳಿದರು.

ಇದರ ನಡುವೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಅಲ್ಪಮಟ್ಟಿಗಿನ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ನೀತಿ ಸಂಹಿತೆಯ ನಡುವೆಯೇ ರಾಜ್ಯಕ್ಕೆ ಮೋದಿಯವರು ಪರಿಹಾರ ನೀಡಿದ್ದಾರೆಂದು ರಾಜ್ಯ ಬಿಜೆಪಿ ನಾಯಕರು ಮಾಡಿಕೊಳ್ಳುತ್ತಿರುವ ಪ್ರಚಾರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X