ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

Date:

Advertisements

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ ಸಲ ಬಹುಮತ ಪಡೆಯುವುದಿಲ್ಲ ಅವರ ದುರಾಡಳಿತ ಕೊನೆಗಾಣಿಸಬೇಕು ಎಂದು ಹಿರಿಯ ಕಮ್ಯುನಿಸ್ಟ್ ನಾಯಕ ಅಪ್ಪಾಸಾಹೇಬ ಯರನಾಳ ಹೇಳಿದರು.

ವಿಜಯಪುರ ಜಿಲ್ಲೆಯ ಸಮೀಪದ ಶಿವಣಗಿ, ಹಡಗಲಿ ಹಾಗೂ ಆಹೇರಿ ಸೇರಿ ಕೆಲವು ತಾಂಡಾಗಳಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರ ಮತಯಾಚಿಸಿದರು.

ವಿದ್ಯಾವಂತರಾದ ಆಲಗೂರರನ್ನು ಬೆಂಬಲಿಸಿದರೆ ಜಿಲ್ಲೆಗೆ ಅನುಕೂಲವಾಗಲಿದೆ. ಲೋಕಸಭೆ ಚುನಾವಣೆ ವಾತಾವರಣ ಬದಲಾಗಿದೆ. ಸುಳ್ಳು ಹೇಳಿ, ಭಾವನೆ ಕೆರಳಿಸುವ ಮೂಲಕ ಮೋದಿ ಅಧಿಕಾರ ನಡೆಸಿದ್ದಾರೆ. ಇವರ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳಿಸಬೇಕು. ಬಡವರು, ಕೂಲಿಕಾರರಿಗೆ ಒಳ್ಳೆಯದಾಗಬೇಕು. ಮೇಲ್ವರ್ಗದ ಜನರ ಸಂಪೂರ್ಣ ಬೆಂಬಲಿವಿದೆ ಎಂದರು.

Advertisements

ಪಾಲಿಕೆ ಸದಸ್ಯ ರಾಜು ಜಾಧವ ಮಾತನಾಡಿ, ಸಂಸದ ಜಿಗಜಿಣಗಿಯವರು ಯಾವೊಂದು ಕೆಲಸ ಮಾಡಿಲ್ಲ. ಬೆಂಗಳೂರಿಗೆ ಒಂದು ಸರಿಯಾದ ರೈಲು ಮಾಡಲಿಲ್ಲ. ನಮ್ಮ ಲಂಬಾಣಿ ಸಮಾಜಕ್ಕೆ ಕನಿಷ್ಠ ಮರ್ಯಾದೆಯೂ ಕೊಡದೆ ನಮ್ಮ ಓಟೇ ಬೇಡ ಎಂದು ಹೇಳಿದ್ದಾರೆ. ಅವರಿಗೆ ಈ ಸಲ ಬುದ್ಧಿ ಕಲಿಸಬೇಕು ಎಂದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ಸಮುದಾಯಗಳ ಬಗ್ಗೆ ಗೌರವವಿಲ್ಲದ ಈಗಿನ ಸಂಸದರಿಂದ ಯಾವುದೇ ಉಪಯೋಗವಿಲ್ಲ. ಕಾಂಗ್ರೆಸ್‌ಗೆ ಮತ ನೀಡಿದರೆ ಅದು ವ್ಯರ್ಥವಾಗುವುದಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಯೋಜನೆ ಹಾಕಿಕೊಂಡಿದ್ದೇನೆ. ನಿಮ್ಮ ಸೇವಕನಾಗಿ ದುಡಿದು ವಿಶ್ವಾಸ ಉಳಿಸಿಕೊಳ್ಳುವೆ ಎಂದು ಹೇಳಿದರು.

ಖೀರು ಮಾಸ್ತರ ಅವರು ಮಾತನಾಡಿ, ತಾಂಡಾ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ. ನಮ್ಮ ಹಿತ ಯಾವತ್ತೂ ಕಾಪಾಡಿದೆ. ನಾವು ನಿಮ್ಮ ಜತೆಗಿದ್ದೇವೆ ಎಂದರು.

ರಾಜಶೇಖರ ಅವಜಿ ಪ್ರಸ್ತಾವಿಕ ಮಾತನಾಡಿ, ಈ ಸಲ ಪ್ರಜ್ಞಾವಂತಿಕೆಯಿಂದ ನಾವು ಮತಚಲಾಯಿಸುವ ಸಂದರ್ಭ ಬಂದಿದೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಡವರ ಪರ ರಾಹುಲ್ ಗಾಂಧಿಯವರು ಮಿಡಿದಿದ್ದಾರೆ ಎಂದರು.

ಜಗನು ಮಾಸ್ತರ, ಲಾಲು ಮೊಕದ್ದಮ್, ಪ್ರಫುಲ್ ಮಂಗಣ್ಣವರ, ಯುವರಾಜ ರಾಠೋಡ, ಅರ್ಜುನ್ ರಾಠೋಡ, ಅನಿಲ ಭಾಗು ರಾಠೋಡ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X