ತುಮಕೂರು | ಮೆಕ್ಯಾನಿಕ್‌ಗಳ ನಿಂದನೆ; ರಮೇಶ್ ಅರವಿಂದ್, ಪ್ರೇಮಾ, ಅನುಶ್ರೀ ವಿರುದ್ಧ ದೂರು ದಾಖಲು

Date:

Advertisements

ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ ಮತ್ತು ಗಗನ ಹೆಸರಿನ ಸ್ಪರ್ಧಿ ಹಾಗೂ ಜ಼ೀ-ವಾಹಿನಿಯ ‘ಮಹಾನಟಿ’ ರಿಯಾಲಿಟಿ ಶೋ ನಿರ್ಮಾಪಕ, ನಿರ್ದೇಶಕರ ವಿರುದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಟಿಡಬ್ಲೂಒಟಿಎ ಸಹಯೋಗದೊಂದಿಗೆ ಫ್ರೆಂಡ್ಸ್, ದ್ವೀ ಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಜ಼ೀ ವಾಹಿನಿಯ ಮಹಾನಟಿ ರಿಯಾಲಿಟಿ ಶೋ ಮತ್ತು ಅದರಲ್ಲಿ ಭಾಗವಹಿಸುವ ಪ್ರಮುಖ ನಟ-ನಟಿಯರ ವಿರುದ್ಧ ದೂರು ನೀಡಿದ್ದಾರೆ.

ಕಾರಣ, ಮೆಕ್ಯಾನಿಕ್ ಕೆಲಸ ಮಾಡುವ ಶ್ರಮಿಕ ಸಮುದಾಯವನ್ನು ತಮ್ಮ ಜ಼ೀ ಟಿವಿಯ ಮಹಾನಟಿ ರಿಯಾಲಿಟಿ ಶೋನಲ್ಲಿ ಕೀಳಾಗಿ ನಿಂದಿಸಿ, ಅವಮಾನಿಸಲಾಗಿದೆ ಎಂದು ದೂರುದಾರರು ವಿವರಿಸಿದ್ದಾರೆ.

Advertisements

ಮಹಾನಟಿ ರಿಯಾಲಿಟಿ ಶೋ ನಡೆಸುತ್ತಿದ್ದ ಒಂದು ಎಪಿಸೋಡಲ್ಲಿ ಗಗನ ಎಂಬ ಹೆಸರಿನ ಹದಿಹರೆಯದ ವಯಸ್ಸಿನ ಸ್ಪರ್ಧಿಯೊಬ್ಬಾಕೆ, ತನ್ನ ನಟನಾ ಕೌಶಲವನ್ನು ಪ್ರದರ್ಶಿಸುವಾಗ, ಮೆಕ್ಯಾನಿಕ್ ಒಬ್ಬನನ್ನು ಪ್ರೀತಿಸುತ್ತಿರುವ ತನ್ನ ಗೆಳತಿಯನ್ನು ಕನ್ವಿನ್ಸ್ ಮಾಡುವಂಥ ಸನ್ನಿವೇಶವನ್ನು ವೇದಿಕೆಯಲ್ಲಿ ನಿರ್ವಹಿಸುತ್ತಾಳೆ. ಆಗ ಆಕೆಯ ಸಂಭಾಷಣೆಯಲ್ಲಿ ಮೆಕ್ಯಾನಿಕ್ ಒಬ್ಬನ ಪ್ರೀತಿಗೆ ಬಿದ್ದರೆ ಅದು ಕೊಚ್ಚೆಯಲ್ಲಿ ಬಿದ್ದಂತೆ. ಹರೆಯದ ವಯಸ್ಸಿನ ಹುಂಬ ಆಕಾಂಕ್ಷೆಯಲ್ಲಿ ಆತನನ್ನೇ ವರಿಸಿದರೆ ದೊಡ್ಡಮಟ್ಟದ ದುಡ್ಡು, ಶ್ರೀಮಂತಿಕೆ ಇಲ್ಲದೆ ಗ್ರೀಸ್ ತಿಂದುಕೊಂಡು ಬದುಕಲಾಗದು… ಎಂಬಂಥ ಒಣ ಮಾತುಗಳು ಬರುತ್ತವೆ. ಈ ಮಾತುಗಳು ನಾಡಿನ ವೃತ್ತಿಪರ ಮೆಕ್ಯಾನಿಕ್ ಸಮುದಾಯವನ್ನು ಕೆರಳಿಸಿವೆ ಎಂದರು.

ಒಂದಿಡೀ ಶ್ರಮಿಕ ವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮಾತಾಡಿರುವ ಆ ನಟಿಮಣಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡುವಂತೆ ಉತ್ಪ್ರೇಕ್ಷೆಯಿಂದ ವರ್ತಿಸುವ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ, ನಿರ್ಮಾಪಕ ರಾಘವೇಂದ್ರ ಹುಣಸೂರು, ನಿರ್ದೇಶಕ ಮತ್ತು ಜ಼ೀ-ಟಿವಿ ವಾಹಿನಿಯ ಮೇಲೆ ರಾಜ್ಯದ ಮೆಕ್ಯಾನಿಕ್ ಸಂಘದವರು ಎಲ್ಲ ಊರುಗಳಲ್ಲೂ ದೂರು ದಾಖಲಿಸಿ, ಜವಾಬ್ದಾರಿಯುತ ಸ್ಥಾನದಲ್ಲಿ ಕೂತಿರುವ ಇಂಥ ಜನಪ್ರಿಯ ಅವಿವೇಕಿಗಳ ಮೇಲೆ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡುವ ಮತ್ತು ಶ್ರಮಿಕ ವರ್ಗದ ಜನರನ್ನು ಕೊಚ್ಚೆ ಎಂದು ಅವಮಾನಿಸಿ ಅವರ ಆತ್ಮಗೌರವಕ್ಕೆ ಚ್ಯುತಿ ತಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಕಠಿಣಕ್ರಮ ಕೈಗೊಳ್ಳಬೇಕೆಂದು ಕೋರಿ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿಗೆ ದೂರು ದಾಖಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ, ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ದಿ ಸಂಘದ, ನಿಸಾರ್ ಅಹಮದ್, ಚಂದ್ರು, ದಸ್ತಗೀರ್, ಯೋಗೀಶ್, ಮೋಮಿನ್, ಚೆನ್ನಾಚಾರ್, ಚಾಂದು, ಅಬ್ಬು, ಛೋಟು ಮತ್ತಿತರರು ಉಪಸ್ಥಿತರಿದ್ದರು. ಜೊತೆಗೆ ದಸಂಸ ತಾಲೂಕು ಸಂಚಾಲಕ ಸಿ.ಎಸ್. ಲಿಂಗದೇವರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X