Fact Check | BJP ನಾಯಕನ ಅಶ್ಲೀಲ ಚಿತ್ರವನ್ನು ಡಿಕೆಶಿ ಅವರದ್ದೆಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್‌ ಹೆಸರಿನ ಪೇಜ್

Date:

Advertisements

ಅಶ್ಲೀಲ ಚಿತ್ರವೊಂದನ್ನು ಹಂಚಿಕೊಂಡಿರುವ ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ – ಆ ಚಿತ್ರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರದ್ದು ಎಂದು ಆರೋಪಿಸಿದೆ. ಚಿತ್ರವನ್ನು ಹಂಚಿಕೊಂಡು, “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ.. ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ. ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂಬ ಹೇಳಿಕೆಯನ್ನು ಪೋಸ್ಟ್‌ ಮಾಡಿಲಾಗಿದೆ.

ಪೋಸ್ಟ್‌ಗೆ ಕಮೆಂಟ್‌ ಮಾಡಿರುವ ಹಲವರು, ಅದು ಡಿಕೆ ಶಿವಕುಮಾರ್ ಅವರದ್ದು ಎಂದು ಸಾಬೀತು ಮಾಡಿ ನೋಡಣ ಎಂದು ಸವಾಲು ಹಾಕಿದ್ದಾರೆ. ಇನ್ನೂ, ಕೆಲವರು ಅದು ಶಿವಕುಮಾರ್ ಅವರದ್ದೇ ಇರಬಹುದು ಎಂದೂ ಹೇಳುತ್ತಿದ್ದಾರೆ.  ಫೋಟೊದಲ್ಲಿ ಕಂಡುಬರುವ ವ್ಯಕ್ತಿ ನಿಜವಾಗಿಯೂ ಡಿ.ಕೆ.ಶಿವಕುಮಾರ್ ಅವರೇ? ಸತ್ಯವೇನು ಪರಿಶೀಲಿಸೊಣ.

ಪ್ರತಿಪಾದನೆ: ಅಶ್ಲೀಲ ಚಿತ್ರ ಡಿಕೆ ಶಿವಕುಮಾರ್ ಅವರದ್ದು
ಸತ್ಯ: ಅದು ಡಿಕೆ ಶಿವಕುಮಾರ್ ಅವರದ್ದಲ್ಲ, ದಿಯು-ದಮನ್‌ನ ಬಿಜೆಪಿ ಅಧ್ಯಕ್ಷನ ಚಿತ್ರ

ಫ್ಯಾಕ್ಟ್‌ಚೆಕ್:

Advertisements

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೊವನ್ನು ಗೂಗಲ್ ಲೆನ್ಸ್‌ನಲ್ಲಿ ಸರ್ಚ್ ಮಾಡಿದಾಗ ಇದೇ ಚಿತ್ರವನ್ನು ಹೋಲುವ ಹಲವು ಪೋಸ್ಟ್‌ಗಳು ಲಭ್ಯವಾದವು.

ಮತ್ತಷ್ಟು ಗೂಗಲ್ ಸರ್ಚ್ ಮಾಡಿದಾಗ, 3 ನವೆಂಬರ್ 2019ರಲ್ಲಿ democraticaccent.com ಎಂಬ ಸುದ್ದಿ ತಾಣ ಮಾಡಿದ ವರದಿಯೊಂದು ಲಭ್ಯವಾಗಿದೆ. ವರದಿಯ ಪ್ರಕಾರ, ದಮನ್ ಮತ್ತು ದಿಯು – ಕೇಂದ್ರಾಡಳಿತ ಪ್ರದೇಶ – ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಅವರು ಮಹಿಳೆಯೊಬ್ಬರೊಂದಿಗೆ ಇರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2024 04 29 at 17.17.37

ಅಸಲಿಗೆ ಇದು ಡಿ.ಕೆ ಶಿವಕುಮಾರ್‌ಗೆ ಸಂಬಂಧಿಸಿದ ಫೋಟೋಗಳಲ್ಲ. ಬದಲಿಗೆ ಇದು ಬಿಜೆಪಿ ನಾಯಕ ಗೋಪಾಲ್‌ ತಂಡೇಲ್‌ ಫೋಟೋಗಳಾಗಿವೆ. ದ ಫೋಟೋಗಳು ಹೊರಬಿದ್ದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ಸಹ ನೀಡಿದ್ದರು. ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

WhatsApp Image 2024 04 29 at 17.11.14

ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾರವರೇ ಖುದ್ದು ಗೋಪಾಲ್‌ರವರ ರಾಜಿನಾಮೆಯನ್ನು ಸ್ವೀಕರಿಸಿದ್ದರು ಈಗ ಆ ಫೋಟೋಗಳನ್ನು ಡಿ.ಕೆ. ಶಿವಕುಮಾರ್‌ ಅವರದ್ದೇ ಎಂಬಂತೆ ಬಿಂಬಿಸಿ ಹರಿಬಿಡಲಾಗುತಿದ್ದು, ಇದೊಂದು ಸುಳ್ಳು ಸುದ್ದಿಯಾಗಿದೆ. ಈ ನಕಲಿ ಫೋಟೋಗಳನ್ನು ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.

ಅಂತಿಮವಾಗಿ ಹೇಳುವುದಾದರೆ, ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಡಲು ಹೋಗಿ, ತಮ್ಮದೇ ಮೈತ್ರಿ ಪಕ್ಷದ(BJP) ನಾಯಕನ ಅಶ್ಲೀಲ ಫೋಟೋವನ್ನು ಹಂಚಿಕೊಂಡು ಜೆಡಿಎಸ್‌ ಯುವ ಘಟಕ ಮುಜುಗರಕ್ಕೆ ಒಳಗಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X