ಬೆಂಗಳೂರು | ಕೋರ್ಟ್‌ ಆವರಣದಲ್ಲಿ ವಕೀಲನಿಗೆ ಚಾಕುವಿನಿಂದ ಇರಿದ ಮಹಿಳೆ

Date:

Advertisements
  • ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ವಕೀಲ
  • ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿ ಹೊರ ಬಂದ ವಕೀಲರೊಬ್ಬರ ಮೇಲೆ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ. ಕಾಂಚನಾ ಎಂಬ ಮಹಿಳೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಕೀಲ ಕೃಷ್ಣಾರೆಡ್ಡಿ ಹಲ್ಲೆಗೊಳಗಾದವರು. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.

ಏನಿದು ಹಿನ್ನೆಲೆ?

Advertisements

ಕಾಂಚನಾ ನಾಲ್ಕು ವರ್ಷಗಳ ಹಿಂದೆ ಪೀಣ್ಯದ ನಿವಾಸಿ ಹರೀಶ್ ಹತ್ತಿರ ನಾಲ್ಕು ಲಕ್ಷ ಹಣವನ್ನು ಕೈ ಸಾಲವಾಗಿ ಪಡೆದಿದ್ದರು. ಪರಿಚಯಸ್ಥೆ ಎಂಬ ಹಿನ್ನೆಲೆ ಹರೀಶ್ ಸಾಲವನ್ನು ನೀಡಿದ್ದಾರೆ.

ಕೊಟ್ಟ ಸಾಲವನ್ನು ನಾಲ್ಕು ವರ್ಷಗಳಾದರೂ ಹಿಂತಿರುಗಿ ನೀಡಿರಲಿಲ್ಲ. ಈ ಬಗ್ಗೆ ಹರೀಶ್ ಕಾಂಚನಾಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಅವರಿಂದ ಚೆಕ್ ಪಡೆದಿದ್ದರು. ಚೆಕ್ ಬೌನ್ಸ್ ಆಗಿತ್ತು. ಹಾಗಾಗಿ, ಹರೀಶ್ ತಮ್ಮ ವಕೀಲ ಕೃಷ್ಣಾರೆಡ್ಡಿ ಮೂಲಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ನ್ಯಾಯಾಲಯದಲ್ಲಿ ಶುಕ್ರವಾರ ವಾದ-ಪ್ರತಿವಾದ ನಡೆದ ನಂತರ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಾಲ್‌ಬಾಗ್‌ನ ವಾಯುವಿಹಾರಿಗಳಿಗೆ ಮತದಾನದ ಬಗ್ಗೆ ಜಾಗೃತಿ

ನ್ಯಾಯಾಲಯದಲ್ಲಿ ಕಲಾಪ ಮುಗಿಸಿ ಹೊರಬಂದ ಕೃಷ್ಣಾರೆಡ್ಡಿ, ಪ್ರತಿವಾದಿಯಾಗಿದ್ದ ಕಾಂಚನಾ, ನನ್ನ ವಿರುದ್ಧ ಕೇಸ್ ಮುಂದುವರೆಸುತ್ತೀಯಾ ಎಂದು ಹೇಳಿ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ, ಇಬ್ಬರ ನಡುವೆ ಸಂಘರ್ಷ ಹೆಚ್ಚಾಗಿದೆ. ಕಾಂಚನಾ ಚಾಕುವಿನಿಂದ ಕೃಷ್ಣಾರೆಡ್ಡಿ ಅವರ ಕಣ್ಣಿನ ಮೇಲ್ಬಾಗಕ್ಕೆ ಚುಚ್ಚಿದ್ದಾರೆ. ಗಾಯಗೊಂಡ ಕೃಷ್ಣಾರೆಡ್ಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಾಂಚನಾ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X