ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

Date:

Advertisements

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಡುತ್ತಿರುವ ಜನಪ್ರಿಯ ಯೂಟ್ಯೂಬರ್‌ ಧ್ರುವ್ ರಾಠಿ ಅವರ ಕುಟುಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳು ಹರಿದಾಡುತ್ತಿವೆ.

ವೈರಲ್‌ ಆಗುತ್ತಿರುವ ಪೋಸ್ಟ್‌ಗಳಲ್ಲಿ ರಾಠಿ ಅವರ ನಿಜವಾದ ಹೆಸರು ಬಧ್ರೂದ್ದೀನ್‌ ರಷೀದ್‌ ಲಹೋರಿ ಅವರ ಪತ್ನಿಯ ಹೆಸರು ಜೂಲಿ. ಇವರು ಪಾಕಿಸ್ತಾನಿ ಪ್ರಜೆಯಾಗಿದ್ದು, ಪಾಕ್‌ನಲ್ಲಿ ಅವರನ್ನು ಜುಲೈಕಾ ಎಂಬುದಾಗಿ ಕರೆಯಲಾಗುತ್ತದೆ. ಅದಲ್ಲದೆ ದಂಪತಿಗಳು ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಕರಾಚಿ ಬಂಗಲೆಯಲ್ಲಿ ಪಾಕ್‌ನ ಸೇನಾ ರಕ್ಷಣೆಯೊಂದಿಗೆ ವಾಸಿಸುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.

ಸರಿಸಮಾರು 2 ಕೋಟಿ ಚಂದಾದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಖ್ಯಾತಿ ಗಳಿಸಿದ್ದಾರೆ. ತಮ್ಮ ಹಲವು ಪೋಸ್ಟ್‌ಗಳಲ್ಲಿ ಕೇಂದ್ರ ಸರ್ಕಾರದ ವಂಚನೆ, ದುರಾಡಳಿತವನ್ನು ಒಂದೊಂದಾಗಿ ಬಿಚ್ಚಿಡುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ತಮ್ಮ ವಿರುದ್ಧದ ಸುಳ್ಳು ಆರೋಪಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಧ್ರವ್‌ ರಾಠಿ, ”ನಾನು ಮಾಡುತ್ತಿರುವ ವಿಡಿಯೋಗಳಿಗೆ ಅವರ ಬಳಿ ಉತ್ತರವಿಲ್ಲದ ಕಾರಣ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನೀವು ಹೇಗೆ ಹತಾಶೆಗೊಂಡು ನನ್ನ ಪತ್ನಿಯ ಕುಟುಂಬವನ್ನು ಇಲ್ಲಿಗೆ ಎಳೆದು ತರುತ್ತಿದ್ದೀರಿ ಎಂಬುದು ಇದರಿಂದ ಗೊತ್ತಾಗುತ್ತಿದೆ. ಈ ಐಟಿ ಸೆಲ್‌ನ ಉದ್ಯೋಗಿಗಳಿಗೆ ಅಸಹ್ಯಕರ ಮಾನದಂಡವಿರುವುದನ್ನು ನೀವು ನೋಡಬಹುದು” ಎಂದು ವಾಗ್ದಾಳಿ ನಡೆಸಿದ್ದಾರೆ

ಅಂದ ಹಾಗೆ ಹರಿಯಾಣದ ರೋಟಕ್‌ನವರಾದ ಧ್ರುವ್‌ ರಾಠಿ, ಜಾಟ್‌ ಕುಟುಂಬದಲ್ಲಿ ಜನಿಸಿದ್ದು, ರೋಟಕ್‌ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ತಮ್ಮ ಇಂಜಿನಿಯರಿಂಗ್ ಪದವಿಯನ್ನು ಜರ್ಮನಿಯಲ್ಲಿ ಪೂರೈಸಿ ಅಲ್ಲಿಯೇ ವಾಸವಾಗಿದ್ದಾರೆ. ಪತ್ನಿ ಜೂಲಿ ಜರ್ಮನಿಯ ಪ್ರಜೆಯಾಗಿದ್ದು, 2021ರಲ್ಲಿ ಇವರಿಬ್ಬರೂ ಆಸ್ಟ್ರೀಯಾದ ವಿಯನ್ನಾದಲ್ಲಿ ವಿವಾಹವಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X