ಪ್ರತಿಕೂಲ ಹವಾಮಾನ: ಯುಎಇ ಪ್ರಯಾಣಿಕರಿಗೆ ಭಾರತೀಯ ವಿಮಾನ ಸಂಸ್ಥೆಗಳಿಂದ ಸಲಹೆ

Date:

Advertisements

ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ.

ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ ಮತ್ತು ಚಂಡಮಾರುತದಿಂದ ಜನರಿಗೆ ಎಚ್ಚರದಿಂದಿರಲು ಸೂಚಿಸಿದ್ದು , ಅಧಿಕಾರಿಗಳು ಆರೆಂಜ್ ಅಲರ್ಟ್ ನೀಡಲು ಸೂಚಿಸಿದ್ದಾರೆ.

ಹದಗೆಟ್ಟ ಹವಾಮಾನ ಪರಿಸ್ಥಿತಿಗಳನ್ನು ನಿರೀಕ್ಷಿಸುತ್ತಿರುವ ಸರ್ಕಾರವು ಮುಂದಿನ ಎರಡು ದಿನಗಳವರೆಗೆ “ಮಧ್ಯಮದಿಂದ ಭಾರೀ ಮಳೆ”ಯಾಗುವ ಸಾಧ್ಯತೆ ಕುರಿತು ಎಚ್ಚರಿಸಿದೆ.

Advertisements

ಇಂಡಿಗೋ, ವಿಸ್ತಾರಾ ಮತ್ತು ಸ್ಪೈಸ್‌ ಜೆಟ್‌ಗಳು ಯುಎಇಯಲ್ಲಿನ ಹವಾಮಾನ ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿನ ಪ್ರತಿಕೂಲ ಹವಾಮಾನದ ಕಾರಣ , ನಮ್ಮ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ದಯವಿಟ್ಟು ನಿಮ್ಮ ವಿಮಾನದ ಸ್ಟೆಟಸ್ ಟ್ರ್ಯಾಕ್ ಮಾಡಿ ”ಎಂದು ಇಂಡಿಗೋ ಹೇಳಿದೆ.

“ದುಬೈನಲ್ಲಿ ಕೆಟ್ಟ ಹವಾಮಾನದಿಂದಾಗಿ (ಮಳೆಯೊಂದಿಗೆ ಗುಡುಗು ಸಹಿತ ಮಳೆ), ಎಲ್ಲ ನಿರ್ಗಮನಗಳು/ಆಗಮನಗಳ ಮೇಲೆ ಪರಿಣಾಮ ಬೀರಬಹುದು” ಎಂದು ಸ್ಪೈಸ್‌ಜೆಟ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ.

ಯುಎಇಯಲ್ಲಿನ ಹವಾಮಾನ ಪರಿಸ್ಥಿತಿಯಿಂದಾಗಿ ದುಬೈನ ಪುರಸಭೆಯ ಎಲ್ಲಾ ಬೀಚ್‌ಗಳು, ಸಾರ್ವಜನಿಕ ಉದ್ಯಾನವನಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಿಸಿದೆ. ಗುರುವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ಅಬುಧಾಬಿಯ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ಜನರು ಕೆಲಸಕ್ಕಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X