ತುಮಕೂರು | ಜಗತ್ತು ಕಂಡ ಅದ್ಭುತ ಸಮಾಜ ಸುಧಾರಕ ಅಂಬೇಡ್ಕರ್: ಡಾ.ನಾಗಭೂಷಣ್ ಬಗ್ಗನಡು

Date:

Advertisements

ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅದ್ಭುತ ಸಮಾಜ ವಿಜ್ಞಾನಿ. ಬಹಳ ದೊಡ್ಡ ಸಮಾಜ ಸುಧಾರಕ  ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಪಟ್ಟರು.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಅಂಬೇಡ್ಕರ್ ಯುವಕ ಸಂಘದಿಂದ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಕಾರ್ಮಿಕರ, ಶೋಷಿತರ, ರೈತರ, ಮಹಿಳೆಯರ ಪರವಾಗಿ ಇಡೀ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ದನಿ ಎತ್ತಿದವರು. ಅವರ ಪರವಾಗಿ ಹೋರಾಡಿದವರು ಅಂಬೇಡ್ಕರ್. ಅಲ್ಲಿಯವರೆಗೂ ಕಾರ್ಮಿಕರ, ಶೋಷಿತರ, ರೈತರ, ಮಹಿಳೆಯರ ಬಗ್ಗೆ ಮಾತನಾಡಿದವರು, ಬರೆದವರು ವಿರಳ ಅಂತಹ ಮಹಾನ್ ಚೇತನರ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಹೋರಾಟಗಾರ ಕೊಟ್ಟ ಶಂಕರ್ ಮಾತನಾಡಿ ಶಿಕ್ಷಣ ಎಲ್ಲಾ ವಿಮೋಚನೆಗೆ ದಾರಿ, ನಾವು ಶಿಕ್ಷಣ ಪಡೆದು ಪ್ರಶ್ನೆ ಮಾಡುವುದನ್ನು ಕಲಿಯದಿದ್ದರೆ ಗುಲಾಮಗಿರಿಯನ್ನು ಅನುಭವಿಸಬೇಕಾಗುತ್ತದೆ. ಓದು ನಮ್ಮನ್ನು ಪ್ರಶ್ನೆ ಮಾಡುವುದನ್ನು ಕಲಿಸುತ್ತದೆ. ಇದನ್ನೇ ಅಂಬೇಡ್ಕರ್ ಅವರು ಹೇಳಿದ್ದು, ನಾವು ಅಂಬೇಡ್ಕರ್ ಅವರನ್ನು ಅವರ ಜಯಂತಿ ಆಚರಿಸುವ ಮೂಲಕ ತಿಳಿಯಬೇಕು. ಅವರು ವಿಚಾರಗಳನ್ನು ಜನರಿಗೆ ತಿಳಿಸಬೇಕು ಎಂದು  ಹೇಳಿದರು.

Advertisements

ಇಡೀ ದೇಶದಲ್ಲಿ ಸಂಪ್ರದಾಯಗಳ ಹೆಸರಿನಲ್ಲಿ ದಲಿತರನ್ನು ಶೋಷಣೆ ಮಾಡಲಾಗುತ್ತಿದೆ. ಆದ್ದರಿಂದ ದಲಿತ ಸಮುದಾಯ ಶಿಕ್ಷಣ ಕಲಿತು, ಸಂಘಟನೆಯಾಗಿ ಆ ಮುಖೇನ ಜಾಗೃತಿಯಾಗಬೇಕು. ಯಾವುದು ನ್ಯಾಯ, ಯಾವುದು ಅನ್ಯಾಯ, ಯಾವುದು ಮೌಢ್ಯ ಎಂಬುದನ್ನು ಶಿಕ್ಷಣ ತಿಳಿಸುತ್ತದೆ. ಎಲ್ಲಿ ಶಿಕ್ಷಣ ಇರುತ್ತದೆ ಅಲ್ಲಿ ಸ್ವಾಭಿಮಾನ ಇರುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಒಂದು ಜಾತಿಗೆ ಸೀಮಿತರಲ್ಲ. ಈ ದೇಶದ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಎಲ್ಲರಿಗೂ ಸಲ್ಲುವವರು ಅಂಬೇಡ್ಕರ್. ಇಂತಹ ಮಹಾನಾಯಕರ ಚಿಂತನೆಗಳು ದೇಶದ ಮನೆ ಮನೆಗೆ ತಲುಪಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ ಅಂಬೇಡ್ಕರ್ ಅವರು ಕೇವಲ ಭಾರತ ರತ್ನ ಅಷ್ಟೆ ಅಲ್ಲ. ಇಡೀ ಪ್ರಪಂಚಕ್ಕೆ ವಿಶ್ವರತ್ನರಾಗಿದ್ದಾರೆ. ಅವರು ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಕೊಡುಗೆ ನೀಡಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರು ಈ ಜಗತ್ತಿಗೆ ತಿಳಿ ಹೇಳಿದವರು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ತಿಳಿ ಹೇಳಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಜೆ.ಎನ್.ರಾಜಸಿಂಹ, ಬರಹಗಾರರಾದ ಡಾ. ರವಿಕುಮಾರ್ ನೀಹಾ, ಸಂತೋಷ್ ಕೋಡಿಹಳ್ಳಿ, ಮಾಜಿ ನಗರಸಭಾ ಸದಸ್ಯ ಬಸವರಾಜು, ಕಲ್ಲುಕೋಟೆ ಲಿಂಗರಾಜು, ಸಣ್ಣಪ್ಪ, ಡಾ. ಮೂರ್ತಿ ತಿಮ್ಮನಹಳ್ಳಿ ಸೇರಿದಂತೆ ಹಲವರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X