ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

Date:

Advertisements
  • ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು
  • 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಕಾಂಗ್ರೆಸ್‌ ಮತ್ತುಎಎಪಿ ಮುಖಂಡರು ಒತ್ತಾಯಿಸಿದ್ದಾರೆ. ಸವದತ್ತಿ ಚುನಾವಣಾಧಿಕಾರಿಗಳ ಕಚೇರಿ ಬಳಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿದೆ.

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ದಿ. ಮಾಮನಿ ಅವರ ಪತ್ನಿ ರತ್ನಾ ಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಇವರು ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಲೋಪದೋಷಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಎಎಪಿ ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ರತ್ನಾ ಮಾಮನಿ ಅವರು 2019ಕ್ಕೂ ಮುಂಚೆ ಇದ್ದಂತ ಫಾರಂ ನಂಬರ್ 29ನ್ನು ಭರ್ತಿ ಮಾಡಿದ್ದಾರೆ. 2019ರ ನಂತರ ಫಾರಂ ಬದಲಾಗಿದೆ. ಹೀಗಾಗಿ, 2018ರ ನಮೂನೆಯಲ್ಲಿ ನಾಮಪತ್ರ ಸಲ್ಲಿಸಿರುವ ರತ್ನ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಉಭಯ ಪಕ್ಷಗಳು ಒತ್ತಾಯಿಸಿವೆ.

Advertisements

ಅಲ್ಲದೆ, ಚುನಾವಣಾ ಅಧಿಕಾರಿಗಳು ಏ.20 ರಂದು ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯವಾದ ಬಳಿಕ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಆದರೆ, ಚುನಾವಣಾ ಅಧಿಕಾರಿಗಳು ಇವರ ನಾಮಪತ್ರವನ್ನು ತಿರಸ್ಕರಿಸದೆ ಹಾಗೇ ಇಟ್ಟುಕೊಂಡಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣವಾಗಿದೆ. ಇದೇ ವಿಷಯವಾಗಿ ಶನಿವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಸಮಯ ನಿಗದಿ ಪಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? : ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಮೂರು ಪಕ್ಷದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಉದ್ವಿಘ್ನ ವಾತಾವರಣ ಉಂಟಾಗಿದೆ. ಚುನಾವಣಾ ಅಧಿಕಾರಿಗಳು ಒಬ್ಬೊಬ್ಬರನ್ನೆ ಒಳಕ್ಕೆ ಕರೆಸಿಕೊಂಡು ಚರ್ಚಿಸುತ್ತಿರುವುದರಿಂದ ಮತ್ತಷ್ಟು ಕುತೂಹಲ ಕೆರಳಿಸಿದೆ.

ಸದ್ಯದ ಮಾಹಿತಿ ಪ್ರಕಾರ ಎಲ್ಲರ ವಿಚಾರಣೆ ಪೂರ್ಣಗೊಂಡಿದ್ದು, ಚುನಾವಣಾ ಅಧಿಕಾರಿಗಳು ಆದೇಶವನ್ನು ಕೆಲವೇ ಕ್ಷಣಗಳಲ್ಲಿ ಹೊರಡಿಸಿರುವುದರಿಂದ ಸವದತ್ತಿ ನಗರದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಇದೇ ವಿಷಯಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ “ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಡವಟ್ಟಾಗಿದೆ. ಆದರೆ, ಮುಖ್ಯಮಂತ್ರಿ ಕಚೇರಿಯಿಂದ ಚುನಾವಣಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬೆಳಗಾವಿ ಹವಾಮಾನ ವರದಿ – 23 ಆಗಸ್ಟ್ 2025

ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಗರಿಷ್ಠ ತಾಪಮಾನ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X