ಕೊಲೆ ಬೆದರಿಕೆ | ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

Date:

Advertisements

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಮೊದಲ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.

Advertisements

ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ’ ಎಂದು ತಿಳಿಸಿದರು.

“ಇಂತಹ ಸೂಕ್ಷ್ಮ ವಿಚಾರದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವುದು ಕಷ್ಟ. ಮೊದಲು ಸಂತ್ರಸ್ತೆ ಮಹಿಳೆ ಬಂದು ದೂರು ಕೊಡಬೇಕು ಎಂದ ಅವರು, ಪ್ರಜ್ವಲ್ ರೇವಣ್ಣ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಮೂಲಕ ವಿದೇಶಕ್ಕೆ ಹೋಗಿದ್ದು ಸತ್ಯ, ಕೇಂದ್ರ ಸರಕಾರ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಕೊಟ್ಟಿದೆ. ಹೀಗಾಗಿ ರಾತ್ರೋ ರಾತ್ರಿ ಹೋಗಿದ್ದಾರೆ” ಎಂದು ಹೇಳಿದರು.

“ಎಸ್‌ಐಟಿಯಿಂದ IPC 41A ಜಾರಿ‌ಮಾಡಲಾಗಿದೆ. ನೋಟಿಸ್ ಜಾರಿ ಮಾಡಿದ ಬಳಿಕ ಕೂಡಲೇ ಬಂದು ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದರೆ ಅವರನ್ನು ಬಂಧಿಸಬೇಕಾಗುತ್ತದೆ ಎಂದರು. ರೇವಣ್ಣ ಅವರು ಇಂದು ಅಧಿಕಾರಿಗಳ ಮುಂದೆ ಹಾಜರಾಗುತ್ತೆನೆ ಎಂದು ಹೇಳಿದ್ದಾರೆ. ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ” ಎಂದು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X