ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯದ್ದೇ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿಲ್ಲದಿದ್ದರೂ, ಆಕೆಯ ಯಾವುದೇ ತಪ್ಪಿಲ್ಲದೆ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ. ಈಕೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳ ಜೊತೆಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿದೆ.

ಯುವಕನ ಮಗ ಯುವತಿಯೊಬ್ಬಳನ್ನು ಅಪಹರಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಯುವತಿ ಕಡೆಯವರು ಥಳಿಸಿದ್ದಾರೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು. ಈಕೆಯ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ಇವರು ದೂರಿದ್ದಾರೆ.

Advertisements

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ, “ನಿನ್ನ ಮಗ ಎಲ್ಲಿದ್ದಾನೆ ಹೇಳು” ಎಂದು ಪೀಡಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಹನಮವ್ವಳಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೆಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಸಂಬಂಧ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X