ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

Date:

Advertisements

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್‌ ಕೋರ್ಟ್‌ ಅದೇಶ ಹೊರಡಿಸಿದೆ. ಅಪರಾಧಿಗಳಿಗೆ ದಂಡವನ್ನೂ ವಿಧಿಸಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಾಳಾಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಮತ್ತು ಅದೇ ಗ್ರಾಮದ ಸಾಯಬಣ್ಣ ಕೊಣ್ಣೂರ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಬಾನು ಅವರ ಕುಟುಂಬ ಒಪ್ಪಿರಲಿಲ್ಲ. 2017ರಲ್ಲಿ ಅವರು ಊರು ತೊರೆದು ಹೋಗಿ, ವಿವಾಹವಾಗಿದ್ದರು. ದೂರದ ಊರಿನಲ್ಲಿ ವಾಸವಾಗಿದ್ದರು.

ಕೆಲ ತಿಂಗಳಗಳ ಬಳಿಕ ಗರ್ಭಿಣಿಯಾಗಿದ್ದ ಬಾನು ಹೆರಿಗೆಗಾಗಿ ಸಾಯಬಣ್ಣ ಅವರ ಮನೆಗೆ ಬಂದಿದ್ದರು. ಆಗ, ದಂಪತಿಗಳನ್ನು ಹತ್ಯೆ ಮಾಡಲು ಬಾನು ಕುಟುಂಬ ಮುಂದಾಗಿತ್ತು. ಸಾಯಬಣ್ಣ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು. ಸಾಯಬಣ್ಣ ಅವರು ಹಲ್ಲೆಯಿಂದ ತಪ್ಪಿಇಕೊಂಡಿದ್ದರು. ಆದರೆ, ಬಾನು ತಪ್ಪಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

Advertisements

ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆಯಿಂದ ಬಾನು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮೂರ್ಛೆಹೋಗಿದ್ದ ಆಕೆಯ ಮೇಲೆ ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಆಕೆಯ ಕುಟುಂಬಸ್ಥರೇ ಆಕೆಯನ್ನು ಕೊಂದಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ, ಅಪರಾಧಿ ಇಬ್ರಾಹಿಂಸಾಬ್ ಅತ್ತಾರ ಮತ್ತು ಅಕ್ಬರಸಾಬ್ ಅತ್ತಾರಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ರಂಜಾನಬಿ ಅತ್ತಾರ, ದಾವಲಬಿ ಜಮಾದಾರ್, ಅಜ್ಮಾ ದಖನಿ, ಜಿಲಾನಿ‌ ದಖನಿ, ಅಬ್ದುಲ್ ಖಾದರ್ ದಖನಿ, ದಾವಲಭಿ ಧನ್ನೂರಗೆ ಜೀವಾವಧಿ‌ ಶಿಕ್ಷೆ ಮತ್ತು 4.19 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X