ಜೆಡಿಎಸ್‌ ನಾಯಕರ ಕುಟುಂಬದ ಒಳ ಜಗಳದಿಂದ ಪ್ರಜ್ವಲ್‌ ಪ್ರಕರಣ ಬೆಳಕಿಗೆ: ಡಿಸಿಎಂ ಡಿಕೆ ಶಿವಕುಮಾರ್‌

Date:

Advertisements

ಜೆಡಿಎಸ್‌ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

‘ಮೇ 7ರ ಬಳಿಕ ಪ್ರಕರಣ ಎಲ್ಲಿಗೆ ಹೋಗುತ್ತದೆ ಕಾದು ನೋಡಿ’ ಎಂಬ ಎಚ್‌ ಡಿ ಕುಮಾರಸ್ವಾಮಿ ಅವರ ಆರೋಪದ ಕುರಿತು ಶನಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, “ಮೇ 7 ಅಲ್ಲ. ಅಲ್ಲಿವರೆಗೂ ಏಕೆ ಕಾಯಬೇಕು. ಇದರ ಮೂಲ, ಹಿನ್ನೆಲೆ ಏನು ಎಂಬುದನ್ನು ಬಿಚ್ಚಬೇಕಾ? ಇದು ಅವರ ಕುಟುಂಬದ ಆಂತರಿಕ ವಿಷಯ”ಎಂದರು.

“ವಿಡಿಯೊಗಳು ಬಹಿರಂಗವಾದ ಬಳಿಕ ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಹೇಳಿದವರು ಯಾರು? ರಾಜ್ಯದ ಜನರ ಕ್ಷಮೆ ಕೇಳಿದ್ದು ಯಾರು? ಅವರ ಕುಟುಂಬ ಮತ್ತು ನಮ್ಮ ಕುಟುಂಬ ಬೇರೆ ಬೇರೆ ಎಂದು ಹೇಳಿದವರು ಯಾರು? ಬಿಜೆಪಿಯವರು ಗಂಟೆಗೊಂದು ಗಳಿಗೆಗೊಂದು ಮಾತನಾಡುತ್ತಿದ್ದಾರೆ. ಜೆಡಿಎಸ್‌ನವರೂ ಅದೇ ರೀತಿ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

Advertisements

ಒಕ್ಕಲಿಗ ನಾಯಕತ್ವ ಪಡೆಯಲು ಪ್ರಜ್ವಲ್‌ ಪ್ರಕರಣ ಹೊರ ಹಾಕಲಾಗಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, “ನನಗೆ ಕಾಂಗ್ರೆಸ್‌ ನಾಯಕ ಎಂಬುದೇ ಸಾಕು. ಒಕ್ಕಲಿಗ ನಾಯಕನ ಪಟ್ಟ ಬೇಕಿಲ್ಲ. ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ಗೌರವ ಕೊಡುವುದು, ಸಹಾಯ ಮಾಡುವುದು ನನ್ನ ಕರ್ತವ್ಯ ಅದನ್ನು ಮಾಡುತ್ತೇನೆ. ಆದರೆ, ಒಕ್ಕಲಿಗ ನಾಯಕ ಎಂದು ಕರೆಸಿಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ತಿಳಿಸಿದರು.

ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ ನಾಯಕರು ಸಂಪರ್ಕಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಜೆಡಿಎಸ್‌ ಪಕ್ಷದ ಯಾರ ಜತೆಗೂ ನಾನು ಸಂಪರ್ಕದಲ್ಲಿಲ್ಲ. ಅವರ ಪಕ್ಷದ ವಿಚಾರಕ್ಕೆ ನಾನು ತಲೆ ಹಾಕುವುದಿಲ್ಲ. ಅವರ ಶಾಸಕರು, ಕುಟುಂಬದವರು ಹತಾಶರಾಗಿದ್ದಾರೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X